ಬಿಜೆಪಿ ನಾಯಕಿ ಕೃಷ್ಣ ಭಟ್ಟಾಚಾರ್ಯ ನಿವಾಸದ ಮೇಲೆ ಟಿಎಂಸಿ ದಾಳಿ 
ದೇಶ

ಬಿಜೆಪಿ ನಾಯಕಿ ಕೃಷ್ಣ ಭಟ್ಟಾಚಾರ್ಯ ನಿವಾಸದ ಮೇಲೆ ಟಿಎಂಸಿ ಕಾರ್ಯಕರ್ತರ ದಾಳಿ

ರೋಸ್ ವ್ಯಾಲಿ ಚಿಟ್ ಫಂಡ್ ಹಗರಣದ ಸಂಬಂಧ ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ ಅವರನ್ನು ಬಂಧನಕ್ಕೊಳಪಡಿಸುತ್ತಿದ್ದಂತೆ ಪಶ್ಚಿಮಬಂಗಾಳದಲ್ಲಿ ರಾಜಕೀಯ ಹಗ್ಗಜಗ್ಗಾಟ ತಾರಕ್ಕೇರಿದೆ...

ಕೋಲ್ಕತಾ: ರೋಸ್ ವ್ಯಾಲಿ ಚಿಟ್ ಫಂಡ್ ಹಗರಣದ ಸಂಬಂಧ ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ ಅವರನ್ನು ಬಂಧನಕ್ಕೊಳಪಡಿಸುತ್ತಿದ್ದಂತೆ ಪಶ್ಚಿಮಬಂಗಾಳದಲ್ಲಿ ರಾಜಕೀಯ ಹಗ್ಗಜಗ್ಗಾಟ ತಾರಕ್ಕೇರಿದೆ.

ನಿನ್ನೆಯಷ್ಟೇ ಬಿಜೆಪಿ ಕಚೇರಿ ಮೇಲೆ ದಾಳಿ ನಡೆಸಿ ಬಿಜೆಪಿ ಕಾರ್ಯಕರ್ತರ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಇದಾದ ಬಳಿಕ ಕಳೆದ ರಾತ್ರಿ ಬಿಜೆಪಿ ನಾಯಕಿ ಕೃಷ್ಣ ಭಟ್ಟಾಚಾರ್ಯ ಅವರ ನಿವಾಸದ ಮೇಲೂ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದು, ಭಟ್ಟಾಚಾರ್ಯ ಅವರನ್ನು ಥಳಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಕೋಲ್ಕತಾದ ಉತ್ತರ್ಪಾರ ಪ್ರದೇಶದಲ್ಲಿರುವ ಭಟ್ಟಾಚಾರ್ಯ ಅವರ ನಿವಾಸದ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಇದಲ್ಲದೆ, ಭಟ್ಟಾಚಾರ್ಯ ಅವರ ನಿವಾಸದ ಮೇಲೆ ಬಾಂಬ್ ಎಸೆದಿರುವುದಾಗಿಯೂ ವರದಿಗಳು ತಿಳಿಸಿವೆ.

ಕಳೆದ ರಾತ್ರಿ 9.30ರ ಸುಮಾರಿಗೆ ಟಿಎಂಸಿ ಪಕ್ಷದ ಕಾರ್ಯಕರ್ತರು ಮನೆಯ ಮೇಲೆ ದಾಳಿ ನಡೆಸಿದ್ದರು. ಕಣ್ಣ ಎದುರಿಗೇ ಮನೆ ಮೇಲೆ ಬಾಂಬ್ ಎಸೆದಿದ್ದರು. ಅಲ್ಲದೆ, ನನ್ನನ್ನು ಹಿಗ್ಗಾಮುಗ್ಗಾ ಥಳಿಸಿದ್ದರು. ಕೆಲ ನಿಮಿಷದ ಬಳಿಕ ನಾನು ಪ್ರಜ್ಞೆಕಳೆದುಕೊಂಡಿದ್ದೆ ಎಂದು ಕೃಷ್ಣ ಭಟ್ಟಾಚಾರ್ಯ ಅವರು ಹೇಳಿಕೊಂಡಿದ್ದಾರೆ.

ಗಾಯಗೊಂಡ ಕೃಷ್ಣ ಭಟ್ಟಾಚಾರ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT