ಸಾಂದರ್ಭಿಕ ಚಿತ್ರ 
ದೇಶ

ಬೆಂಗಳೂರು ಸಾಮೂಹಿಕ ಲೈಂಗಿಕ ದೌರ್ಜನ್ಯ: 8 ಮಂದಿ ಬಂಧನ

ಹೊಸ ವರ್ಷಾಚರಣೆ ದಿನದಂದು ಕಮ್ಮನಹಳ್ಳಿಯಲ್ಲಿ ಯುವತಿಯೊಬ್ಬಳ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಪೊಲೀಸರು ಈ ವರೆಗೂ 8 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆಂದು...

ಬೆಂಗಳೂರು: ಹೊಸ ವರ್ಷಾಚರಣೆ ದಿನದಂದು ಕಮ್ಮನಹಳ್ಳಿಯಲ್ಲಿ ಯುವತಿಯೊಬ್ಬಳ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಪೊಲೀಸರು ಈ ವರೆಗೂ 8 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆಂದು ಗುರುವಾರ ತಿಳಿದುಬಂದಿದೆ.

ಹೊಸ ವರ್ಷದ ಆರಂಭವಾಗುವುದಕ್ಕೂ ಹಿಂದಿನ ದಿನ ಸಂಭ್ರಮಾಚರಣೆ ವೇಳೆ ಎಂ.ಜಿ. ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಕೆಲ ಕಿಡಿಗೇಡಿಗಳು ಯುವತಿಯರ ಮೇಲೆ ಸಾಮೂಹಿಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂಬ ಆರೋಪಗಳು ಕೇಳಿಬಂದಿತ್ತು. ಈ ಪ್ರಕರಣಕ್ಕೆ ರಾಜ್ಯ ಮತ್ತು ರಾಷ್ಟ್ರದಾದ್ಯಂತ ತೀವ್ರ ಖಂಡನೆಗಳು ವ್ಯಕ್ತವಾಗುತ್ತಿದೆ. ಇದರ ನಡುವೆಯೇ ಕಮ್ಮನಹಳ್ಳಿಯಲ್ಲಿ ಉತ್ತರ ಭಾರತದ ಮೂಲದವರು ಎನ್ನಲಾದ ಯುವತಿಯೊಬ್ಬರನ್ನು ನಡುರಸ್ತೆಯಲ್ಲಿಯೇ ತಡೆದು ಲೈಂಗಿಕ ಕಿರುಕುಳ ನೀಡಲಾಗಿದೆ. ಘಟನೆ ನಡೆದ ಸ್ಥಳದಲ್ಲಿದ್ದ ಮನೆಯೊಂದರ ಹೊರಗೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ವಿಡಿಯೋ ಸೆರೆಯಾಗಿತ್ತು. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದ್ದು, ಮಹಿಳಾಪರ ಸಂಘಟನೆಗಳು ಸೇರಿದಂತೆ ಎಲ್ಲೆಡೆ ವ್ಯಾಪಕ ವಿರೋಧಗಳು ವ್ಯಕ್ತವಾಗತೊಡಗಿವೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸರ್ ಆಯುಕ್ತ ಹೇಮಂತ್ ನಿಂಬಾಲ್ಕರ್ ಅವರು, ಪೂರ್ವ ವಿಭಾಗದ ಡಿಸಿಪಿ ಅಜಯ್ ಹಿಲ್ಲೋರಿ ಮತ್ತು ಈಶಾನ್ಯ ವಿಭಾಗದ ಪಿ.ಎಸ್. ಹರ್ಷ ಅವರ ನೇತೃತ್ವದಲ್ಲಿ ತಂಡವನ್ನು ರಚಿಸಿದ್ದರು. ಘಟನೆ ನಡೆದ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಮೊಬೈಲ್ ಟವರ್ ಲೋಕೇಷನ್ ಆಧರಿಸಿ 12 ಮಂದಿಯನ್ನು ಬಂಧನಕ್ಕೊಳಪಡಿಸಿ ವಿಚಾರಣೆಗೊಳಪಡಿಸಿದ್ದರು. ವಿಚಾರಣೆ ಬಳಿಕ ನಾಲ್ವರನ್ನು ಬಿಡುಗಡೆ ಮಾಡಿದ್ದು, ಇನ್ನೂ 8 ಮಂದಿಯೊಡನೆ ವಿಚಾರಣೆ ಮುಂದುವರೆಸಿದ್ದಾರೆಂದು ತಿಳಿದುಬಂದಿದೆ.

ಆರೋಪಿಗಳು ಸ್ಥಳೀಯರೇ ಆಗಿರಬೇಕು. ಯುವತಿಗೆ ಆ ಹುಡುಗರು ತಿಳಿದವರೇ ಆಗಿರಬೇಕು ಇಲ್ಲವೇ ಘಟನೆಗೂ ಮುನ್ನ ಮೊದಲೇ ನೋಡಿರಬೇಕು. ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುವುದಕ್ಕೂ ಮುನ್ನ ಆರೋಪಿಗಳು ಅವರನ್ನು ಹಿಂಬಾಲಿಸಿದ್ದಾರೆ. ಹೊೆಸ ವರ್ಷದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ಬಳಿಕ ಯುವತಿ ಆಟೋದಲ್ಲಿ ಪ್ರಯಾಣ ಬೆಳೆಸಿದ್ದರು. ಈ ವೇಳೆ ಮೂರು ದ್ವಿಚಕ್ರ ವಾಹನಗಳಲ್ಲಿ ಬಂದ 6 ಮಂದಿ ದುಷ್ಕರ್ಮಿಗಳು, ಆಟೋವನ್ನು ಹಿಂಬಾಲಿಸಿದ್ದಾರೆ. ಮಾರ್ಗದ ಮಧ್ಯೆ ಆಟೋವನ್ನು ತಡೆದು ಯುವತಿಯರಿಗೆ ಹೊಸ ವರ್ಷದ ಶುಭಾಶಯ ಹೇಳಇದ್ದಾರೆ. ನಂತರವೂ ಯುವತಿಯರಿದ್ದ ಆಟೋವನ್ನು ಹಿಂಬಾಲಿಸಿದ್ದಾರೆ. ಈ ನಡುವೆ ಒಬ್ಬ ಯುವತಿ ಆಟೋ ಇಳಿದು ಮನೆಗೆ ಹೋಗಿದ್ದಾರೆ. ಆದರೆ, ಮತ್ತೊಬ್ಬ ಯುವತಿ ಕಮ್ಮನಹಳ್ಳಿಯ 5ನೇ ಮುಖ್ಯರಸ್ತೆಯಲ್ಲಿ ಇಳಿದು ಮನೆ ಕಡೆಗೆ ನಡೆದು ಹೋಗುವಾಗ ಆರು ಮಂದಿ ದುಷ್ಕರ್ಮಿಗಳ ಪೈಕಿ ಇಬ್ಬರು ಮುಂದೆ ಬಂದು ಲೈಂಗಿಕ ದೌರ್ಜನ್ಯ ನಡೆಸಿ ಪರಾರಿಯಾಗಿದ್ದಾರೆಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT