ಸಮಾಜವಾದಿ ಪಕ್ಷದ ಹಿರಿಯ ನಾಯಕ ರಾಮ್ ಗೋಪಾಲ್ ಯಾದವ್ 
ದೇಶ

229 ಪೈಕಿ 212 ಶಾಸಕರು ಅಖಿಲೇಶ್'ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ: ರಾಮ್ ಗೋಪಾಲ್ ಯಾದವ್

229 ಶಾಸಕರ ಪೈಕಿ 212 ಶಾಸಕರು ಈಗಾಗಲೇ ಅಖಿಲೇಶ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆಂದು ಸಮಾಜವಾದಿ ಪಕ್ಷದ ಹಿರಿಯ ನಾಯಕ ರಾಮ್ ಗೋಪಾಲ್ ಯಾದವ್ ಅವರು ಶುಕ್ರವಾರ...

ಲಖನೌ: 229 ಶಾಸಕರ ಪೈಕಿ 212 ಶಾಸಕರು ಈಗಾಗಲೇ ಅಖಿಲೇಶ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆಂದು ಸಮಾಜವಾದಿ ಪಕ್ಷದ ಹಿರಿಯ ನಾಯಕ ರಾಮ್ ಗೋಪಾಲ್ ಯಾದವ್ ಅವರು ಶುಕ್ರವಾರ ಹೇಳಿದ್ದಾರೆ.

ಸಮಾಜವಾದಿ ಪಕ್ಷದಲ್ಲಿ ಉಂಟಾಗಿರುವ ಬಿಕ್ಕಟ್ಟು ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, 229 ಶಾಸಕರ ಪೈಕಿ ಅಖಿಲೇಶ್ ಅವರಿಗೆ 212 ಶಾಸಕರು ಬೆಂಬಲ ವ್ಯಕ್ತಪಡಿಸಿದ್ದಾರೆ. 68 ಎಂಎಲ್ ಸಿ ಗಳ ಪೈಕಿ 56 ಹಾಗೂ 24 ಸಂಸದರ ಪೈಕಿ 15 ಮಂದಿ ಅಖಿಲೇಶ್ ಗೆ ಬೆಂಬಲ ವ್ಯಕ್ತಪಡಿಸಿದ ಅಫಿಡವಿಟ್ ಗೆ ಸಹಿ ಮಾಡಿದ್ದಾರೆಂದು ಹೇಳಿದ್ದಾರೆ.

ಜನವರಿ 9 ರೊಳಗಾಗಿ ಪಕ್ಷದ ನಾಯಕರ ಅಭಿಪ್ರಾಯ ಕುರಿತಂತೆ ಅಫಿಡವಿಟ್ ಸಲ್ಲಿಸುವಂತೆ ಚುನಾವಣಾ ಆಯೋಗ ಸೂಚನೆ ನೀಡಿತ್ತು. ಇದೀಗ ಎಲ್ಲಾ ನಾಯಕರ ಅಭಿಪ್ರಾಯಗಳನ್ನು ಕಲೆಹಾಕಲಾಗಿದ್ದು, ಪಕ್ಷದಲ್ಲಿರುವ ಬಹುತೇಕರು ಅಖಿಲೇಶ್ ಅವರಿಗೆ ಬೆಂಬಲ ವ್ಯಕ್ತಪಡಿಸಿ ಅಫಿಡವಿಟ್ ಗೆ ಸಹಿ ಮಾಡಿದ್ದಾರೆ, ಇಂದು 3-4 ಗಂಟೆಗೆ ಚುನಾವಣಾ ಆಯೋಗಕ್ಕೆ ಭೇಟಿ ನೀಡಿ ಅಫಿಡವಿಟ್ ನ್ನು ಸಲ್ಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಪಕ್ಷದಲ್ಲಿ ಉಂಟಾಗಿರುವ ಬಿರುಕು ಕುರಿತಂತೆ ಮಾತನಾಡಿರುವ ಅವರು, ಪಕ್ಷ ಅಖಿಲೇಶ್ ಅವರ ನೇತೃತ್ವದಲ್ಲಿದ್ದರೆ ನಿಜವಾದ ಸಮಾಜವಾದಿ ಪಕ್ಷವಾಗಲಿದೆ. ಅಖಿಲೇಶ್ ಅವರ ನೇತೃತ್ವದಲ್ಲಿಯೇ ಪಕ್ಷವನ್ನು ನೋಡಲು ಇಚ್ಛಿಸುತ್ತೇವೆ. ಪಕ್ಷದ ಚಿಹ್ನೆ 'ಸೈಕಲ್' ನಮಗೆ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಕಡಿವಾಣ: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ