ಸಮಾಜವಾದಿ ಪಕ್ಷದ ಹಿರಿಯ ನಾಯಕ ರಾಮ್ ಗೋಪಾಲ್ ಯಾದವ್ 
ದೇಶ

229 ಪೈಕಿ 212 ಶಾಸಕರು ಅಖಿಲೇಶ್'ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ: ರಾಮ್ ಗೋಪಾಲ್ ಯಾದವ್

229 ಶಾಸಕರ ಪೈಕಿ 212 ಶಾಸಕರು ಈಗಾಗಲೇ ಅಖಿಲೇಶ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆಂದು ಸಮಾಜವಾದಿ ಪಕ್ಷದ ಹಿರಿಯ ನಾಯಕ ರಾಮ್ ಗೋಪಾಲ್ ಯಾದವ್ ಅವರು ಶುಕ್ರವಾರ...

ಲಖನೌ: 229 ಶಾಸಕರ ಪೈಕಿ 212 ಶಾಸಕರು ಈಗಾಗಲೇ ಅಖಿಲೇಶ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆಂದು ಸಮಾಜವಾದಿ ಪಕ್ಷದ ಹಿರಿಯ ನಾಯಕ ರಾಮ್ ಗೋಪಾಲ್ ಯಾದವ್ ಅವರು ಶುಕ್ರವಾರ ಹೇಳಿದ್ದಾರೆ.

ಸಮಾಜವಾದಿ ಪಕ್ಷದಲ್ಲಿ ಉಂಟಾಗಿರುವ ಬಿಕ್ಕಟ್ಟು ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, 229 ಶಾಸಕರ ಪೈಕಿ ಅಖಿಲೇಶ್ ಅವರಿಗೆ 212 ಶಾಸಕರು ಬೆಂಬಲ ವ್ಯಕ್ತಪಡಿಸಿದ್ದಾರೆ. 68 ಎಂಎಲ್ ಸಿ ಗಳ ಪೈಕಿ 56 ಹಾಗೂ 24 ಸಂಸದರ ಪೈಕಿ 15 ಮಂದಿ ಅಖಿಲೇಶ್ ಗೆ ಬೆಂಬಲ ವ್ಯಕ್ತಪಡಿಸಿದ ಅಫಿಡವಿಟ್ ಗೆ ಸಹಿ ಮಾಡಿದ್ದಾರೆಂದು ಹೇಳಿದ್ದಾರೆ.

ಜನವರಿ 9 ರೊಳಗಾಗಿ ಪಕ್ಷದ ನಾಯಕರ ಅಭಿಪ್ರಾಯ ಕುರಿತಂತೆ ಅಫಿಡವಿಟ್ ಸಲ್ಲಿಸುವಂತೆ ಚುನಾವಣಾ ಆಯೋಗ ಸೂಚನೆ ನೀಡಿತ್ತು. ಇದೀಗ ಎಲ್ಲಾ ನಾಯಕರ ಅಭಿಪ್ರಾಯಗಳನ್ನು ಕಲೆಹಾಕಲಾಗಿದ್ದು, ಪಕ್ಷದಲ್ಲಿರುವ ಬಹುತೇಕರು ಅಖಿಲೇಶ್ ಅವರಿಗೆ ಬೆಂಬಲ ವ್ಯಕ್ತಪಡಿಸಿ ಅಫಿಡವಿಟ್ ಗೆ ಸಹಿ ಮಾಡಿದ್ದಾರೆ, ಇಂದು 3-4 ಗಂಟೆಗೆ ಚುನಾವಣಾ ಆಯೋಗಕ್ಕೆ ಭೇಟಿ ನೀಡಿ ಅಫಿಡವಿಟ್ ನ್ನು ಸಲ್ಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಪಕ್ಷದಲ್ಲಿ ಉಂಟಾಗಿರುವ ಬಿರುಕು ಕುರಿತಂತೆ ಮಾತನಾಡಿರುವ ಅವರು, ಪಕ್ಷ ಅಖಿಲೇಶ್ ಅವರ ನೇತೃತ್ವದಲ್ಲಿದ್ದರೆ ನಿಜವಾದ ಸಮಾಜವಾದಿ ಪಕ್ಷವಾಗಲಿದೆ. ಅಖಿಲೇಶ್ ಅವರ ನೇತೃತ್ವದಲ್ಲಿಯೇ ಪಕ್ಷವನ್ನು ನೋಡಲು ಇಚ್ಛಿಸುತ್ತೇವೆ. ಪಕ್ಷದ ಚಿಹ್ನೆ 'ಸೈಕಲ್' ನಮಗೆ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT