ವಿಪಿನ್ 
ದೇಶ

ಅನಾರೋಗ್ಯ ಪೀಡಿತ ಮಗನ ದಯಾಮರಣಕ್ಕೆ ಅವಕಾಶ ನೀಡಿ: ಪ್ರಧಾನಿ ಮೋದಿಗೆ ತಂದೆ ಪತ್ರ

ಅನಾರೋಗ್ಯದಿಂದ ಬಳಲುತ್ತಿರುವ ಮಗನಿಗೆ ದಯಾಮರಣಕ್ಕೆ ಅವಕಾಶ ನೀಡಿ ಎಂದು ತಂದೆಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ...

ಆಗ್ರ: ಅನಾರೋಗ್ಯದಿಂದ ಬಳಲುತ್ತಿರುವ ಮಗನಿಗೆ ದಯಾಮರಣಕ್ಕೆ ಅವಕಾಶ ನೀಡಿ ಎಂದು ತಂದೆಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. 
ಉತ್ತರಪ್ರದೇಶದ ಕಾರ್ಮಿಕನಾಗಿರುವ ರಾಜು ಎಂಬುವರು ತಮ್ಮ ಮಗ ವಿಪಿನ್ ಅಂಗವೈಕಲ್ಯ ರಕ್ತಹೀನತೆ, ಅಪರೂಪದ ರಕ್ತದ ಕಾಯಿಲೆಯಿಂದ ಬಳಲುತ್ತಿದ್ದು ಈ ನರಕದಿಂದ ಮುಕ್ತಿ ನೀಡುವ ಸಲುವಾಗಿ ದಯಾಮರಣಕ್ಕೆ ಅವಕಾಶ ನೀಡುವಂತೆ ಪ್ರಧಾನಿಗೆ ಮನವಿ ಮಾಡಿದ್ದಾರೆ. ಜತೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ಪ್ರತ್ಯೇಕ ಪತ್ರವನ್ನು ಬರೆದಿದ್ದಾರೆ. 
ಹಲವು ವರ್ಷಗಳಿಂದ ತನ್ನ ಮಗನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಗನ ಚಿಕಿತ್ಸೆಗಾಗಿ ಸಾಕಷ್ಟು ದುಡ್ಡು ಮಾಡಿದ್ದೇನೆ. ಆದರೆ ಆತನ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿಲ್ಲ. ಹೀಗಾಗಿ ಆತನಿಗೆ ದಯಾಮರಣಕ್ಕೆ ಅವಕಾಶ ನೀಡಿ ಎಂದು ಪತ್ರ ಬರೆದಿದ್ದಾರೆ. 
ಮಗ ವಿಪಿನ್ ಗೆ ಮೂಳೆ ಮಜ್ಜೆಯ ಕಸಿ ಮಾಡಬೇಕಿದೆ. ವಿಪಿನ್ ಚಿಕಿತ್ಸೆಗಾಗಿ ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆ ಎಂದು ಈಗಾಗಲೇ ಹಲವು ಆಸ್ಪತ್ರೆಗಳಿಗೆ ತಿರುಗಿದ್ದೇವೆ ಆದರೆ ಸುಧಾರಣೆ ಕಾಣಿಸುತ್ತಿಲ್ಲ. ಮೂಳೆ ಮಜ್ಜೆಯ ಕಸಿಗಾಗಿ ಲಕ್ಷಾಂತರ ರುಪಾಯಿ ವೆಚ್ಚವಾಗುವುದರಿಂದ ನಮ್ಮಿಂದ ಅಷ್ಟು ಹಣ ಖರ್ಚು ಮಾಡಲು ಸಾಧ್ಯವಿಲ್ಲ ಎಂದು ತಂದೆ ತಮ್ಮ ಅಳಲನ್ನು ಪತ್ರದಲ್ಲಿ ತೊಡಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!