ಪಾಕಿಸ್ತಾನ ನೂತನ ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೆದ್ ಬಾಜ್ವಾ 
ದೇಶ

ಪಾಕ್ ಮೇಲೆ ಮತ್ತೊಂದು ಸೀಮಿತ ದಾಳಿ: ಭಾರತದ ಹೇಳಿಕೆಯನ್ನು ತಳ್ಳಿಹಾಕಿದ ಪಾಕಿಸ್ತಾನ

ಪಾಕಿಸ್ತಾನದ ಮೇಲೆ ಮತ್ತೊಂದು ಸೀಮಿತ ದಾಳಿ ನಡೆಸುವ ಭಾರತದ ಹೇಳಿಕೆಯನ್ನು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೆದ್ ಬಾಜ್ವಾ ಅವರು ಗುರುವಾರ ತಳ್ಳಿಹಾಕಿದ್ದಾರೆ...

ರಾವಲ್ಪಿಂಡಿ: ಪಾಕಿಸ್ತಾನದ ಮೇಲೆ ಮತ್ತೊಂದು ಸೀಮಿತ ದಾಳಿ ನಡೆಸುವ ಭಾರತದ ಹೇಳಿಕೆಯನ್ನು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೆದ್ ಬಾಜ್ವಾ ಅವರು ಗುರುವಾರ ತಳ್ಳಿಹಾಕಿದ್ದಾರೆ.

ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಭಾರತೀಯ ಸೇನೆಯ ಮುಖ್ಯಸ್ಥ ಬಿಪಿನ್ ರಾವತ್ ಅವರು, ಗಡಿಯಲ್ಲಿ ಶಾಂತಿ ಸ್ಥಾಪನೆಗೆ ಭಾರತ ಸದಾ ಮುಂದಿರುತ್ತದೆ. ಆದರೆ ಅದು ಸಾಧ್ಯವಾಗುವುದಿಲ್ಲ ಎಂದಾದರೇ ಭುಜ ಸಡಿಲಿಸಿ ಹಾಗೂ ತೋಳ್ಬಲ ಪ್ರದರ್ಶನಕ್ಕೆ ಭಾರತ ಹಿಂಜರಿಯುವುದಿಲ್ಲ. ಭಾರತ ಯುದ್ಧಕ್ಕೆ ಸಿದ್ಧವಾಗುತ್ತಿದ್ದು, ಪಾಕಿಸ್ತಾನ ವಿರುದ್ಧ ಮತ್ತೊಂದು ಸೀಮಿತ ದಾಳಿ ನಡೆದರೂ ಅಚ್ಚರಿ ಇಲ್ಲ ಎಂದು ಹೇಳಿದ್ದರು.

ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಾಜ್ವಾ ಅವರು, ಭಾರತ ಪಾಕಿಸ್ತಾನದ ಮೇಲೆ ದಾಳಿ ನಡೆಸಿದ್ದೇ ಆದರೆ, ದಾಳಿಗೆ ದಿಟ್ಟ ಉತ್ತರ ನೀಡಲು ಪಾಕಿಸ್ತಾನ ಸದಾ ಸಿದ್ಧವಿರುತ್ತದೆ ಎಂದು ಹೇಳಿದ್ದಾರೆ.

ಜಾಬ್ವಾ ಹೇಳಿಕೆ ಕುರಿತಂತೆ ಪಾಕಿಸ್ತಾನ ಸೇನಾ ವಕ್ತಾರ ಮೇಜರ್ ಜನರಲ್ ಆಸಿಫ್ ಘಫೂರ್ ಅವರು ಸರಣಿ ಟ್ವೀಟ್ ಮಾಡಿದ್ದು, ಪಾಕಿಸ್ತಾನದ ಮತ್ತೊಂದು ಸೀಮಿತ ದಾಳಿ ನಡೆಸಲು ಭಾರತ ಸಿದ್ಧವಿದೆ ಎಂಬ ಹೇಳಿಕೆಯನ್ನು ಬಾಜ್ವಾ ಅವರು ತಿರಸ್ಕರಿಸಿದ್ದಾರೆ. ಅಲ್ಲದೆ, ಪಾಕಿಸ್ತಾನದ ಮೇಲೆ ಯಾವುದೇ ದಾಳಿ ನಡೆದರೂ ದಿಟ್ಟ ಉತ್ತರ ನೀಡಲು ನಮ್ಮ ಸೇನೆ ಸಿದ್ಧವಿದೆ ಎಂದು ಹೇಳಿದ್ದಾರೆಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ ರೂ. 28,000 ಕೋಟಿ ಸಾಲ ವಿತರಣೆಯ ಗುರಿ: ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

SCROLL FOR NEXT