ಎನ್ ಶ್ರೀನಿವಾಸನ್ 
ದೇಶ

ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಗಣ್ಯರು ಭಾಗಿ ಸಾಧ್ಯತೆ

ಜ.2 ರಂದು ಹೊರಬಿದ್ದ ಸುಪ್ರೀಂ ಕೋರ್ಟ್ ನ ತೀರ್ಪಿನಿಂದ ಹಲವು ಪದಾಧಿಕಾರಿಗಳು/ ಸದಸ್ಯರು ವಜಾಗೊಂಡಿದ್ದಾರೆ.

ಚೆನ್ನೈ: ಜ.2 ರಂದು ಹೊರಬಿದ್ದ ಸುಪ್ರೀಂ ಕೋರ್ಟ್ ನ ತೀರ್ಪಿನಿಂದ ಹಲವು ಪದಾಧಿಕಾರಿಗಳು/ ಸದಸ್ಯರು ವಜಾಗೊಂಡಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನ ಬೆನ್ನಲ್ಲೆ ಮಾಜಿ ಸದಸ್ಯರಿಗೆ ಬಿಸಿಸಿಐ ನ ಮಾಜಿ ಅಧ್ಯಕ್ಷ ಎನ್ ಶ್ರೀನಿವಾಸನ್ ಅಭಿನಂದನಾ ಸಮಾರಂಭ, ಬೀಳ್ಕೊಡುಗೆ ಸಮಾರಂಭ ಆಯೋಜಿಸಿದ್ದಾರೆ. 
ಶ್ರೀನಿವಾಸನ್ ಅವರು ಆಯೋಜಿಸಿರುವ ಸಮಾರಂಭಕ್ಕೂ ಬಿಸಿಸಿಐಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಲಾಗುತ್ತಿದೆ. ಸಮಾರಂಭ ನಡೆಸುವ ಬಗ್ಗೆ ಬೆಂಗಳೂರಿನಲ್ಲಿ ಸಭೆಯನ್ನು ಕರೆಯಲಾಗಿದ್ದು, ಎಲ್ಲಾ ರಾಜ್ಯಗಳಿಗೂ ಆಹ್ವಾನ ಕಳಿಸಿಕೊಡಲಾಗಿದೆ. ಬಿಸಿಸಿಐ ನಲ್ಲೇ ಹಲವು ಬಣಗಳಿದ್ದು ಶ್ರೀನಿವಾಸನ್ ಆಯೋಜಿಸಲಾಗಿರುವ ಸಭೆಯಲ್ಲಿ ಕನಿಷ್ಠ 20 ಸದಸ್ಯರು ಭಾಗವಹಿಸುವ ನಿರೀಕ್ಷೆ ಇದೆ  
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಘಟಕದ ಅಧಿಕಾರಿಯೊಬ್ಬರು, ಶ್ರೀನಿವಾಸನ್ ಅವರು ಆಯೋಜಿಸಿರುವುದು ಕೇವಲ ಖಾಸಗಿ ಸಮಾರಂಭವಷ್ಟೇ. ಕಳೆದ ಹಲವು ವರ್ಷಗಳಿಂದ ಜೊತೆಯಲ್ಲಿ ಕಾರ್ಯನಿರ್ವಹಿಸಿದ್ದೆವು. ಇತ್ತೀಚಿನ ಬೆಳವಣಿಗೆಗಳಿಂದಾಗಿ ಭೇಟಿ ಮಾಡಲು ಸಾಧ್ಯವಾಗಿಲ್ಲ, ಆದ್ದರಿಂದ ಇದೊಂದು ಖಾಸಗಿ ಸಭೆ ಎಂದು ಹೇಳಿದ್ದಾರೆ. 
ಸಭೆಯಲ್ಲಿ ಲೋಧಾ ಸಮಿತಿ, ಸುಪ್ರೀಂ ಕೋರ್ಟ್ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂಬ ವದಂತಿಗಳನ್ನು ಬಿಸಿಸಿಐ ರಾಜ್ಯ ಘಟಕದ ಅಧಿಕಾರಿಗಳು ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT