ಪ್ರಕರಣ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿ ಪುಷ್ಟ ಖಾಟ್ರಿ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವುದು 
ದೇಶ

ಅನ್ಯಜಾತಿ ಯುವಕನೊಂದಿಗೆ ಮದುವೆ: ರೊಹ್ಟಕ್'ನಲ್ಲಿ ಮರ್ಯಾದಾ ಹತ್ಯೆ

ಅನ್ಯಜಾತಿ ಯುವಕನನ್ನು ಪ್ರೀತಿಸಿ ಕುಟುಂಬಕ್ಕೆ ವಿರೋಧದ ನಡುವೆಯೂ ಮದುವೆಯಾದ ಕಾರಣಕ್ಕೆ ಯುವತಿಯನ್ನು ಮರ್ಯಾದಾ ಹತ್ಯೆ ಮಾಡಿರುವ ಘಟನೆಯೊಂದು ಹರಿಯಾಣದ ರೊಹ್ಟಕ್ ನಲ್ಲಿ ನಡೆದಿದೆ...

ರೊಹ್ಟಕ್: ಅನ್ಯಜಾತಿ ಯುವಕನನ್ನು ಪ್ರೀತಿಸಿ ಕುಟುಂಬಕ್ಕೆ ವಿರೋಧದ ನಡುವೆಯೂ ಮದುವೆಯಾದ ಕಾರಣಕ್ಕೆ ಯುವತಿಯನ್ನು ಮರ್ಯಾದಾ ಹತ್ಯೆ ಮಾಡಿರುವ ಘಟನೆಯೊಂದು ಹರಿಯಾಣದ ರೊಹ್ಟಕ್ ನಲ್ಲಿ ನಡೆದಿದೆ.

ಸೀಮಾ (20)  ಹತ್ಯೆಯಾದ ಯುವತಿಯಾಗಿದ್ದಾಳೆ. ಅನ್ಯಜಾತಿಯ ಯುವಕನಾಗಿದ್ದ ಪ್ರದೀಪ್ (28) ಎಂಬುವವನನ್ನು ಹಲವು ವರ್ಷಗಳಿಂದಲೂ ಪ್ರೀತಿಸುತ್ತಿದ್ದ ಸೀಮಾ, ಕಳೆದ ಡಿಸೆಂಬರ್ 21 ರಂದು ಕುಟುಂಬದ ವಿರೋಧದ ನಡುವೆಯೂ ವಿವಾಹವಾಗಿದ್ದಳು.

ಮದುವೆಗೆ ಸೀಮಾ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಮದುವೆಯಾಗ ಬಳಿ ಪತ್ನಿಯೊಂದಿಗೆ ಅಮೃತ್ ಕಾಲೋನಿಯಲ್ಲಿ ವಾಸವಿದ್ದೆ. ಕೆಲಸ ದಿನಗಳ ಬಳಿಕ ಸೀಮಾ ಕುಟುಂಬಸ್ಥರು ಮದುವೆಯನ್ನು ಒಪ್ಪಿಕೊಳ್ಳುತ್ತೇವೆ. ಮತ್ತೆ ಸಂಪ್ರದಾಯದಂತೆ ಮದುವೆ ಮಾಡುತ್ತೇವೆಂದು ಹೇಳಿ ಸೀಮಾಳನ್ನು ತಮ್ಮ ಮನೆಗೆ ಕರೆದೊಯ್ದಿದ್ದರು. ಇದಾದ ಮರುದಿನವೇ ಸೀಮಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂಬ ಸುದ್ದಿ ತಿಳಿಯಿತು. ಮನೆಯ ಹತ್ತಿರ ಹೋದಾಗ ಮೃತದೇಹವನ್ನು ಸ್ಮಶಾನಕ್ಕೆ ತೆಗೆದುಕೊಂಡು ಹೋಗಿರುವ ವಿಚಾರ ತಿಳಿಯಿತು. ನಂತರ ಪೊಲೀಸರಿಗೆ ಮಾಹಿತಿ ನೀಡಲಾಯಿತು ಎಂದು ಸೀಮಾ ಪತಿ ಪ್ರದೀಪ್ ಅವರು ಹೇಳಿಕೊಂಡಿದ್ದಾರೆ.

ಕೂಡಲೇ ಡಿಎಸ್ ಪಿ ಪುಷ್ಪ ಅವರು ಸ್ಥಳಕ್ಕಾಗಮಿಸಿದ್ದರು. ಈ ವೇಳೆ ಮೃತದೇಹವನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸೀಮಾಳನ್ನು ಹತ್ಯೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

ರೊಹ್ಟಕ್ ನಲ್ಲಿ ಮಹಿಳೆಯೊಬ್ಬರು ಹತ್ಯೆಯಾಗಿರುವುದಾಗಿ ಮಾಹಿತಿ ತಿಳಿಯಿತು. ತನಿಖೆ ವೇಳೆ ದಂಪತಿಗಳು ಅಂತರ್ ಜಾತಿ ವಿವಾಹವಾಗಿರುವುದು ತಿಳಿಯಿತು. ಪ್ರದೀಪ್ ಅವರು ಪತ್ನಿಯನ್ನು ಆಕೆಯ ಕುಟುಂಬಸ್ಥರೇ ಕೊಲೆ ಮಾಡಿದ್ದಾರೆಂದು ಹೇಳುತ್ತಿದ್ದರು. ಇದೀಗ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪ್ರಕರಣವೊಂದು ಮರ್ಯಾದಾ ಹತ್ಯೆಯೆಂದು ಶಂಕಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಪುಷ್ಪ ಖಾಟ್ರಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳದಲ್ಲಿ ಸಂಪುಟ ಹಂಚಿಕೆ ಗೊಂದಲ: ಕಾಂಗ್ರೆಸ್ ಹೈಕಮಾಂಡ್ ಸಲಹೆ ತಿರಸ್ಕರಿಸಿದ CM ಸತೀಶನ್, ಖಾತೆ ಹಂಚಿಕೆಯಲ್ಲಿ ಭಿನ್ನಮತ ಸ್ಫೋಟ..!

WTCಯಲ್ಲಿ ಭಾರತಕ್ಕೆ ದೊಡ್ಡ ಹಿನ್ನಡೆ: ಪಾಕಿಸ್ತಾನವನ್ನು 2-0 ಅಂತರದಿಂದ ಸೋಲಿಸಿ Team Indiaನ ಹಿಂದಿಕ್ಕಿದ ಬಾಂಗ್ಲಾ!

ನಮ್ಮ ನೋವನ್ನು ಆನಂದಿಸುತ್ತೀರಾ: ನನಗೆ ವಯಸ್ಸಾಗಿದೆ, ಆದರೆ ಹೋರಾಡೋದು ಮರೆತಿಲ್ಲ; ಸಲ್ಮಾನ್ ಖಾನ್ ಎಚ್ಚರಿಕೆ!

ಆನೇಕಲ್‌ನಲ್ಲಿ ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ರೈತರು, KRS ತೀವ್ರ ವಿರೋಧ!

ನಿಜಕ್ಕೂ ನಮ್ಮದು F…Good Team: ಲೈವ್​ನಲ್ಲೇ 'ಅಶ್ಲೀಲ ಪದ' ಬಳಸಿದ ರಿಷಭ್ ಪಂತ್, ವ್ಯಾಪಕ ಟೀಕೆ, Video!

SCROLL FOR NEXT