ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ 
ದೇಶ

ಅಕಾಲಿ-ಬಿಜೆಪಿ ಕೆಟ್ಟ ಆಡಳಿತದಿಂದಾಗಿ ಪಂಜಾಬ್'ನಲ್ಲಿ ಆರ್ಥಿಕ ಸ್ಥಿತಿ ನಾಶವಾಗಿದೆ: ಮನಮೋಹನ್ ಸಿಂಗ್

ಅಕಾಲಿ ದಳ ಹಾಗೂ ಬಿಜೆಪಿಯ ಕೆಟ್ಚ ಸರ್ಕಾರದಿಂದಾಗಿ ಪಂಜಾಬ್ ರಾಜ್ಯದಲ್ಲಿ ಆರ್ಥಿಕ ಸ್ಥಿತಿ ನಾಶವಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಗುರುವಾರ...

ನವದೆಹಲಿ: ಅಕಾಲಿ ದಳ ಹಾಗೂ ಬಿಜೆಪಿಯ ಕೆಟ್ಚ ಸರ್ಕಾರದಿಂದಾಗಿ ಪಂಜಾಬ್ ರಾಜ್ಯದಲ್ಲಿ ಆರ್ಥಿಕ ಸ್ಥಿತಿ ನಾಶವಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ.

ಫೆ.4 ರಂದು ಪಂಜಾಬ್ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿಂದು ಮನಮೋಹನ್ ಸಿಂಗ್ ಅವರು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಮಾತನಾಡಿರುವ ಅವರು, ಪಂಜಾಬ್ ಎಲ್ಲದರಲ್ಲೂ ಅಸಾಧಾರಣ ಸಾಮರ್ಥ್ಯವನ್ನು ಹೊಂದಿದ್ದು, ಆದರೆ, ಇದು ಸೂಕ್ತ ರೀತಿಯಲ್ಲಿ ಸದ್ಭಳಕೆ ಮಾಡಲಾಗಿಲ್ಲ. ಅಕಾಲಿ ದಳ ಹಾಗೂ ಬಿಜೆಪಿ ಸರ್ಕಾರ ಕಳೆದ 10 ವರ್ಷಗಳಿಂದಲೂ ಪಂಜಾಬ್ ರಾಜ್ಯದಲ್ಲಿ ಕೆಟ್ಟ ಆಡಳಿತವನ್ನು ನಡೆಸಿದ್ದು, ಪಂಜಾಬ್ ನ ಸಾಮರ್ಥ್ಯವನ್ನು ನಾಶ ಮಾಡಿದೆ ಎಂದು ಆರೋಪಿಸಿದ್ದಾರೆ.

ಪಕ್ಷದ ಪ್ರಣಾಳಿಕೆ ದಾರ್ಶನಿಕ ದಾಖಲೆಯಾಗಿದ್ದು, ಕಳೆದ ಹತ್ತು ವರ್ಷಗಳಿಂದ ಪಂಜಾಬ್ ರಾಜ್ಯ ಕಳೆದುಕೊಂಡ ಹಾಗೂ ಪಂಜಾಬ್ ರಾಜ್ಯಕ್ಕೆ ಎದುರಾದ ನಷ್ಟಗಳನ್ನು ನಾವು ಸರಿಪಡಿಸುತ್ತೇವೆಂದು ಈ ಮೂಲಕ ಭರವಸೆಯನ್ನು ನೀಡುತ್ತೇವೆ.

ಪಂಜಾಬ್ ರಾಜ್ಯಕ್ಕೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಅಮರಿಂದರ್ ಸಿಂಗ್ ಅವರು ನಿಂತಿದ್ದು, ಅಮರಿಂದರ್ ಸಿಂಗ್ ಅವರು ಅಂತರ್ ದೃಷ್ಟಿಯವನ್ನು ಹೊಂದಿರುವ ನಾಯಕರಾಗಿದ್ದು, ಇಂತಹ ನಾಯಕರು ಪಂಜಾಬ್ ರಾಜ್ಯಕ್ಕೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT