ಸಂಗ್ರಹ ಚಿತ್ರ 
ದೇಶ

ಭಯೋತ್ಪಾದನೆ ವಿರುದ್ಧ ಅಂತರಾಷ್ಟ್ರೀಯ ಸಮುದಾಯ ಕಠಿಣ ಕ್ರಮ ಕೈಗೊಳ್ಳಬೇಕು: ರಕ್ಷಣಾ ತಜ್ಞರು

ಜಮ್ಮುವಿನ ಜನರಲ್ ರಿಸರ್ವ್ ಎಂಜಿನಿಯರಿಂಗ್ ಪೋರ್ಸ್ (ಜಿಆರ್ ಇಎಫ್ ) ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ತಜ್ಞರು ಖಂಡನೆ ವ್ಯಕ್ತಪಡಿಸಿದ್ದು, ಭಯೋತ್ಪಾನೆ ವಿರುದ್ಧ ಅಂತರಾಷ್ಟ್ರೀಯ ಸಮುದಾಯ ಕಠಿಣ ಕ್ರಮ ಕೈಗೊಳ್ಳಬೇಕೆಂದು...

ನವದೆಹಲಿ: ಜಮ್ಮುವಿನ  ಜನರಲ್ ರಿಸರ್ವ್ ಎಂಜಿನಿಯರಿಂಗ್ ಪೋರ್ಸ್ (ಜಿಆರ್ ಇಎಫ್ ) ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ತಜ್ಞರು ಖಂಡನೆ ವ್ಯಕ್ತಪಡಿಸಿದ್ದು, ಭಯೋತ್ಪಾನೆ ವಿರುದ್ಧ ಅಂತರಾಷ್ಟ್ರೀಯ ಸಮುದಾಯ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸೋಮವಾರ ಆಗ್ರಹಿಸಿದ್ದಾರೆ.

ಅಖ್ನೂರ್ ನಲ್ಲಿ ನಡೆದ ಉಗ್ರರ ದಾಳಿ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ರಕ್ಷಣಾ ತಜ್ಞ ಖಮರ್ ಅಘಾ ಅವರು, ಪಾಕಿಸ್ತಾನ ಸೇನೆ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವುದು ಹಾಗೂ ಭಯೋತ್ಪಾದಕರಿಗೆ ಆರ್ಥಿಕ ನೆರವು, ತರಬೇತಿ ನೀಡುತ್ತಿದೆ. ಅಲ್ಲದೆ, ಗಡಿ ದಾಟಿ ಭಾರತದೊಳಗೆ ನುಸುಳಲು ಪಾಕಿಸ್ತಾನ ಸೇನೆ ಸಹಾಯ ಮಾಡುತ್ತಿದೆ. ಪಾಕಿಸ್ತಾನ ನೇರವಾಗಿ ಉಗ್ರರಿಗೆ ಸಹಾಯ ಮಾಡುತ್ತಿದ್ದು, ಇದರಲ್ಲಿ ಯಾವುದೇ ಸಂಶಯಗಳಿಲ್ಲ. ಹೀಗಾಗಿ ಭಯೋತ್ಪಾದನೆ ವಿರುದ್ಧ ವಿಶ್ವ ಸಮುದಾಯ ಕಠಿಣ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ದಾಳಿ ನಡೆಯುತ್ತಿರುವುದು ಇದು ಮೊದಲೇನಲ್ಲ. ಕಳೆದ ವರ್ಷ ಉಗ್ರರು ಭಾರತದ ಮೇಲೆ ಸಾಕಷ್ಟು ದಾಳಿಗಳನ್ನು ಮಾಡಿದ್ದಾರೆ. ಈ ರೀತಿಯ ಬೆಳವಣಿಗೆಗಳ ವಿರುದ್ಧ ಅಂತರಾಷ್ಟ್ರೀಯ ಸಮುದಾಯ ಖಂಡನೆ ವ್ಯಕ್ತಪಡಿಸಬೇಕಿದೆ. ದಾಳಿಗೆ ಪಾಕಿಸ್ತಾನವೇ ನೇರ ಹೊಣೆಯಾಗಿದೆ. ಏಕೆಂದರೆ, ಉಗ್ರರು ಪಾಕಿಸ್ತಾನದಲ್ಲಿಯೇ ತರಬೇತಿಯನ್ನು ಪಡೆಯುತ್ತಿದ್ದು, ಭಾರತದ ಮೇಲೆ ದಾಳಿ ನಡೆಸಲು ಉಗ್ರರಿಗೆ ಪಾಕಿಸ್ತಾನ ಸೇನೆಯೇ ಕುಮ್ಮಕ್ಕು ನೀಡುತ್ತಿದೆ. ಮುಗ್ಧ ಸೇನಾ ಯೋಧರನ್ನು ಹತ್ಯೆ ಮಾಡಿರುವುದಕ್ಕೆ ಪಾಕಿಸ್ತಾನವೇ ನೇರಹೊಣೆಯಾಗಿದೆ ಎಂದು ತಿಳಿಸಿದ್ದಾರೆ.

ಇದೇ ರೀತಿಯಲ್ಲಿಯೇ ಮತ್ತೊಬ್ಬ ಸೇನಾ ತಜ್ಞ ಮೇಜರ್ ಜನರಲ್ ಎಸ್.ಆರ್. ಸಿನ್ಹೋ ಅವರೂ ಕೂಡ ಪ್ರತಿಕ್ರಿಯೆ ನೀಡಿದ್ದು, ಸೀಮಿತ ದಾಳಿ ಬಳಿಕ ಪಾಕಿಸ್ತಾನ ಭಾರತದ ಮೇಲೆ ದಾಳಿ ಮಾಡುವುದನ್ನು ಮತ್ತಷ್ಟು ಹೆಚ್ಚಿಸಿದೆ. ಪಾಕಿಸ್ತಾನ ಸೇನೆಯನ್ನು ಗುರಿಯಾಗಿಸಿಟ್ಟುಕೊಂಡು ದಾಳಿ ಮಾಡುತ್ತಿದೆ. ಪಾಕಿಸ್ತಾನ ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡುತ್ತಿದೆ. ಅಲ್ಲದೆ, ತಮ್ಮನ್ನು ಕೂಡ ಸಾಯಿಸುತ್ತಾರೆಂಬುದು ತಿಳಿದಿದ್ದರೂ ಉಗ್ರರಿಗೆ ತರಬೇತಿಯನ್ನು ನೀಡುತ್ತಿದ್ದಾರೆ. ಕಾಶ್ಮೀರ-ಪಠಾಣ್ ಕೋಟ್ ನಲ್ಲಿ ಅತೀವ್ರ ಚಳಿಯಿದ್ದು, ಮಂಜು ಬೀಳುತ್ತಿದೆ. ಹೀಗಾಗಿ ಉಗ್ರರು ತಮ್ಮ ಚಟುವಟಿಕೆಗಳನ್ನು ಕಾಶ್ಮೀರದಿಂದ ಬೇರೆಡೆಗೆ ಸ್ಥಳಾಂತರಿಸುತ್ತಿದ್ದಾರೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT