ಸಾಂದರ್ಭಿಕ ಚಿತ್ರ 
ದೇಶ

ಶಬರಿಮಲೆಯನ್ನು ರಾಷ್ಟ್ರೀಯ ಯಾತ್ರಾ ಸ್ಥಳವನ್ನಾಗಿ ಘೋಷಿಸುವಂತೆ ಕೇಂದ್ರಕ್ಕೆ ಆಗ್ರಹ: ರಾಜ್ಯಪಾಲ

ಶಬರಿಮಲೆ ಸ್ವಾಮಿ ಅಯ್ಯಪ್ಪ ಸ್ವಾಮಿ ದೇವಾಲಯವನ್ನು ರಾಷ್ಟ್ರೀಯ ಯಾತ್ರಾ ಸ್ಥಳವನ್ನಾಗಿ ಘೋಷಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಕೇರಳ ರಾಜ್ಯಪಾಲ ..

ಶಬರಿಮಲೆ: ಶಬರಿಮಲೆ ಸ್ವಾಮಿ ಅಯ್ಯಪ್ಪ ಸ್ವಾಮಿ ದೇವಾಲಯವನ್ನು ರಾಷ್ಟ್ರೀಯ ಯಾತ್ರಾ ಸ್ಥಳವನ್ನಾಗಿ ಘೋಷಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಕೇರಳ ರಾಜ್ಯಪಾಲ ಪಿ ಸಥಾಶಿವಂ ಹೇಳಿದ್ದಾರೆ.

ಪಂಪಾ ಸಂಗಮಮ್ ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ಈ ಸಂಬಂಧ ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಜಗತ್ತಿನಲ್ಲಿಯೇ, ಶಬರಿಮಲೆ ದೇವಾಲಯ ಅದ್ವತೀಯವಾಗಿದ್ದು, ಎಲ್ಲಾ ಭಾಷೆ, ಜಾತಿ, ಧರ್ಮದವರನ್ನು ಆಕರ್ಷಿಸುತ್ತಿದೆ. ಶಬರಿಮಲೆಯಲ್ಲಿ ಪರಿಸರ ಸಂಬಂಧಿ ಮತ್ತು ಇಕೋ ಫ್ರೆಂಡ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಅಧ್ಯಕ್ಷ ನ್ಯಾ.ಸ್ವತಂತ್ರ್ಯ ಕುಮಾರ್ ಅವರನ್ನು ಶಬರಿಮಲೆಗೆ ಆಹ್ವಾನಿಸಿ ಸ್ಥಳ ಪರಿಶೀಲನೆ ಮಾಡುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ. ಶಬರಿಮಲೆ ದೇವಾಲಯವನ್ನು ಇತರ ಯಾತ್ರಾ ಸ್ಥಳಗಳ ಜೊತೆ ಹೋಲಿಕೆ ಮಾಡಬಾರದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!