ಸಂಗ್ರಹ ಚಿತ್ರ 
ದೇಶ

ಅಖಿಲೇಶ್ ಯಾದವ್ ಮುಂದಿನ ಮುಖ್ಯಮಂತ್ರಿ; ಅಚ್ಚರಿ ಮೂಡಿಸಿದ ಮುಲಾಯಂ ಸಿಂಗ್ ಹೇಳಿಕೆ

ಪಕ್ಷದ ರಾಷ್ಟ್ರಾಧ್ಯಕ್ಷರೂ ಕೂಡ ಆಗಿರುವ ಮುಲಾಯಂ ಸಿಂಗ್ ಯಾದವ್ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ಅವರೇ ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದ್ದಾರೆ.

ನವದೆಹಲಿ: ಅತ್ತ ಚುನಾವಣಾ ಆಯೋಗದ ಮುಂದೆ ಮುಲಾಯಂ ಸಿಂಗ್ ಬಣ ಹಾಗೂ ಅಖಿಲೇಶ್ ಯಾದವ್ ಬಣ ಸೈಕಲ್ ಗುರುತಿಗಾಗಿ ಹಗ್ಗಜಗ್ಗಾಟ ನಡೆಸುತ್ತಿರುವಂತೆಯೇ ಇತ್ತ ಪಕ್ಷದ ರಾಷ್ಟ್ರಾಧ್ಯಕ್ಷರೂ ಕೂಡ ಆಗಿರುವ  ಮುಲಾಯಂ ಸಿಂಗ್ ಯಾದವ್ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ಅವರೇ ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದ್ದಾರೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಬಂಡಾಯ ಶಮನದತ್ತ ಮುಲಾಯಂ ಸಿಂಗ್ ಯಾದವ್ ಚಿತ್ತ ನೆಟ್ಟಿದ್ದು, ನಿನ್ನೆ ಪಕ್ಷದ ಕಾರ್ಯಕ್ರಮದಲ್ಲಿ ಪುತ್ರ ಅಖಿಲೇಶ್ ಯಾದವ್ ಅವರೇ ಮುಂದಿನ  ಮುಖ್ಯಮಂತ್ರಿ ಎಂದು ಘೋಷಣೆ ಮಾಡುವ ಮೂಲಕ ಅಖಿಲೇಶ್ ಯಾದವ್ ಬಣವನ್ನು ಸಂತೈಸುವ ಪ್ರಯತ್ನ ಮಾಡಿದರು. "ತಮ್ಮ ಪುತ್ರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಜೊತೆ ತಮಗೆ ಯಾವುದೇ  ಜಗಳವೂ ಇಲ್ಲ ಮತ್ತು ಕೆಲ ವಿಚಾರಗಳಲ್ಲಿ ಗೊಂದಲಗಿಳಿದ್ದು, ಶೀಘ್ರವೇ ಅದನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ಮುಲಾಯಂ ಸಿಂಗ್ ಯಾದವ್ ಹೇಳಿದರು.

ಚಿಹ್ನೆಗಾಗಿ ಮುಂದುವರೆದ ಹಗ್ಗ ಜಗ್ಗಾಟ
ಇನ್ನು ಅಖಿಲೇಶ್ ಬಣ ಹಾಗೂ ಮುಲಾಯಂ ಸಿಂಗ್ ಯಾದವ್ ಬಣಗಳು ಪಕ್ಷದ ಚಿಹ್ನೆಗಾಗಿ ಕಸರತ್ತು ಮುಂದುವರೆಸಿದ್ದು, 25 ವರ್ಷಗಳ ಹಿಂದೆ ಸಮಾಜವಾದಿ ಪಕ್ಷವನ್ನು ಸ್ಥಾಪಿಸಿದಾಗ ಪಡೆದುಕೊಳ್ಳಲಾಗಿದ್ದ ‘ಸೈಕಲ್’ ಚಿಹ್ನೆಯ  ಪ್ರತಿಪಾದನೆ ಸಲುವಾಗಿ ದೆಹಲಿಯಲ್ಲಿ ಚುನಾವಣಾ ಆಯೋಗಕ್ಕೆ ಭೇಟಿ ನೀಡಿದ್ದೆ ಎಂದು ಹೇಳಿದ ಮುಲಾಯಂ ಹೇಳಿದ್ದಾರೆ. ಅಂತೆಯೇ ಅಖಿಲೇಶ್ ಯಾದವ್ ಅವರು ತಾವೇ ಪಕ್ಷದ ಮುಖ್ಯಸ್ಥ ಹಾಗೂ ಸೈಕಲ್ ಚಿಹ್ನೆ ತಮಗೆ ಸೇರಿದ್ದು  ಎಂಬುದಾಗಿಯೂ ತಮಗೆ 200-229ಕ್ಕೂ ಹೆಚ್ಚು ಮಂದಿ ಎಸ್​ಪಿ ಶಾಸಕರ ಬೆಂಬಲ ತಮಗಿದೆ ಎಂದು ಪ್ರತಿಪಾದಿಸಿದ್ದಾರೆ. ಉಭಯ ಬಣಗಳ ಅಹವಾಲು ಆಲಿಸಿರುವ ಚುನಾವಣಾ ಆಯೋಗವು ಅಹವಾಲುಗಳು ತೃಪ್ತಿಕರವಾಗದೇ  ಇದ್ದಲ್ಲಿ ಸೈಕಲ್ ಚಿಹ್ನೆಯನ್ನು ಸ್ಥಗಿತಗೊಳಿಸಬಹುದು ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT