ದೆಹಲಿ ಮುಖ್ಯಮಂತ್ರಿ ಮತ್ತು ಆಪ್ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ 
ದೇಶ

ಪ್ರಧಾನಿ ಮೋದಿ ತಮ್ಮ ತಾಯಿಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರೆ: ಕೇಜ್ರಿವಾಲ್

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮ್ಮ ತಾಯಿಯವರನ್ನು ರಾಜಕೀಯ ಲಾಭಕ್ಕಾಗಿ...

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮ್ಮ ತಾಯಿಯವರನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆಪಾದಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪ್ರಧಾನಿಯವರು ತಾಯಿಯನ್ನು ತಮ್ಮ ನಿವಾಸದಲ್ಲಿಯೇ ಇರಿಸಿಕೊಂಡು ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ನಾನು ನನ್ನ ತಾಯಿಯನ್ನು ನೋಡಿಕೊಳ್ಳುತ್ತಿದ್ದೇನೆ. ಅವರ ಆಶೀರ್ವಾದ ಪ್ರತಿದಿನ ಪಡೆಯುತ್ತೇನೆ, ಆದರೆ ಅದನ್ನು ಇಡೀ ಜಗತ್ತಿಗೆ ಹೇಳಿಕೊಂಡು ತಿರುಗಾಡುವುದಿಲ್ಲ. ರಾಜಕೀಯ ಲಾಭಕ್ಕಾಗಿ ನನ್ನ ತಾಯಿಯನ್ನು ಸರದಿಯಲ್ಲಿ ನಿಲ್ಲಿಸುವುದಿಲ್ಲ ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.
ಇಂದು ನರೇಂದ್ರ ಮೋದಿಯವರು ಗುಜರಾತ್ ನ ಗಾಂಧಿನಗರದಲ್ಲಿ ತಮ್ಮ ತಾಯಿಯವರನ್ನು ಭೇಟಿ ಮಾಡಿದ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಈ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಧಾನಿಯವರು ತಮ್ಮ ನಿವಾಸದಲ್ಲಿ ತಾಯಿಯವರನ್ನು ನೋಡಿಕೊಂಡರೆ ಅದುವೇ ಅವರು ಕೊಡುವ ಅತಿದೊಡ್ಡ ಗೌರವ. ಹಿಂದೂ ಧರ್ಮದಲ್ಲಿ ವ್ಯಕ್ತಿ ತನ್ನ ತಾಯಿ ಮತ್ತು ಪತ್ನಿಯನ್ನು ತನ್ನ ಜೊತೆ ಇಟ್ಟುಕೊಳ್ಳಬೇಕು. ಪ್ರಧಾನಿಯವರ ನಿವಾಸ ದೊಡ್ಡದಾಗಿದೆ. ಆದರೆ ಮನಸ್ಸು ಚಿಕ್ಕದಾಗಿದೆ ಎಂದು ತೀಕ್ಷ್ಣವಾಗಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅಧಿಕಾರ ಹಂಚಿಕೆ ಬಗ್ಗೆ ಯಾರೂ ಮಾತನಾಡಬೇಡಿ, ಸಾರ್ವಜನಿಕ ಹೇಳಿಕೆ ಕೊಡಬೇಡಿ': ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಬುದ್ದಿಮಾತು

'ನೀವು ಶಾಶ್ವತ ವಿಪತ್ತು ನಿಧಿ ಏಕೆ ರಚಿಸಿಲ್ಲ': ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನೆ

ಬೆಂಗಳೂರಿನಲ್ಲಿ ಭಯಾನಕ ರೋಡ್ ರೇಜ್: ಬೈಕ್ ಸವಾರನ ಬೆನ್ನಟ್ಟಿ ಲಾರಿ ಗುದ್ದಿಸಿ ಹತ್ಯೆಗೆ ಯತ್ನಿಸಿದ ಚಾಲಕ!

ರೈಲಿನಲ್ಲಿ ನಿದ್ದೆಗೆ ಜಾರಿದ ವ್ಯಾಪಾರಿ; 5.53 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ!

ಜೈಪುರ-ಬಿಕಾನೇರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್-ಟ್ರಕ್ ಮುಖಾಮುಖಿ ಡಿಕ್ಕಿ: ನಾಲ್ವರು ಸಾವು, 27 ಜನರಿಗೆ ಗಾಯ

SCROLL FOR NEXT