ಸಾಂದರ್ಭಿಕ ಚಿತ್ರಿ 
ದೇಶ

ವಾಯು ಮಾಲಿನ್ಯದಿಂದಾಗಿ ದೇಶದಲ್ಲಿ 12 ಲಕ್ಷ ಮಂದಿ ಸಾವು, ದೆಹಲಿ ನಂ.1

ವಾಯು ಮಾಲಿನ್ಯದಿಂದಾಗಿ ದೇಶದಲ್ಲಿ ಪ್ರತಿವರ್ಷ 12 ಲಕ್ಷ ಮಂದಿ ಸಾವನ್ನಪ್ಪುತ್ತಿದ್ದು, ದೇಶದ 20 ಅತ್ಯಂತ ಹೆಚ್ಚು ವಾಯು...

ನವದೆಹಲಿ: ವಾಯು ಮಾಲಿನ್ಯದಿಂದಾಗಿ ದೇಶದಲ್ಲಿ ಪ್ರತಿವರ್ಷ 12 ಲಕ್ಷ ಮಂದಿ ಸಾವನ್ನಪ್ಪುತ್ತಿದ್ದು, ದೇಶದ 20 ಅತ್ಯಂತ ಹೆಚ್ಚು ವಾಯು ಮಾಲಿನ್ಯ ಪೀಡಿತ ನಗರಗಳ ಪೈಕಿ ರಾಷ್ಟ್ರರಾಜಧಾನಿ ದೆಹಲಿ ಮೊದಲ ಸ್ಥಾನ ಪಡೆದಿದೆ.
ಗ್ರೀನ್ ಪೀಸ್ ಇಂಡಿಯಾ ಬಿಡುಗಡೆ ಮಾಡಿರುವ ವರದಿ ಪ್ರಕಾರ, ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡಗಳ ಪ್ರಕಾರ ಗಾಳಿಯ ಗುಣಮಟ್ಟವನ್ನು ಪರಿಶೀಲಿಸಲಾಗಿದ್ದು, ದೇಶದಲ್ಲಿ 168 ನಗರಗಳು ವಾಯು ಮಾಲಿನ್ಯ ಮುಕ್ತವಾಗಿವೆ ಎಂದು ತಿಳಿಸಿದೆ.
ವಾಯು ಮಾಲಿನ್ಯದಿಂದಾಗಿ ದೇಶಾದ್ಯಂತ ಪ್ರತಿ ವರ್ಷ 12 ಲಕ್ಷ ಮಂದಿ ಸಾವನ್ನಪ್ಪುತ್ತಿದ್ದಾರೆ ಮತ್ತು ವಾಯು ಮಾಲಿನ್ಯದಿಂದಾಗಿ ಶೇ.3ರಷ್ಟು ಜಿಡಿಪಿಯನ್ನು ಕಳೆದುಕೊಂಡಿದೆ ಎಂದು ಗ್ರೀನ್ ಪೀಸ್ ಇಂಡಿಯಾ ವರದಿ ವಿವರಿಸಿದೆ.
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಕಾರ, ದಕ್ಷಿಣ ಭಾರತದ ಕೆಲವೇ ನಗರಗಳು ಮಾತ್ರ ವಾಯು ಮಾಲಿನ್ಯದಿಂದ ಬಳಲುತ್ತಿವೆ. ಅತ್ಯಂತ ಹೆಚ್ಚು ಮಾಲಿನ್ಯ ಪೀಡಿತ ನಗರಳ ಪೈಕಿ ದೆಹಲಿ ಮೊದಲ ಸ್ಥಾನ ಪಡೆದರೆ, ಘಾಜಿಯಾಬಾದ್, ಅಲಹಬಾದ್ ಮತ್ತು ಬರೇಲಿ ನಂತರದ ಸ್ಥಾನದಲ್ಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT