ಜೀತ್ ಸಿಂಗ್ 
ದೇಶ

ಯೋಧ ತೇಜ್ ಬಹದ್ದೂರ್ ಬಳಿಕ ಸೌಲಭ್ಯ ತಾರತಮ್ಯ ಕುರಿತು ಸಿಆರ್ಪಿಎಫ್ ಯೋಧನ ವಿಡಿಯೋ

ಬಿಎಸ್ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ಸೇನೆಯಲ್ಲಿ ಯೋಧರಿಗೆ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ವಿಡಿಯೋವೊಂದನ್ನು ಹರಿಬಿಟ್ಟಿದ್ದು ಇಡೀ ದೇಶದಲ್ಲಿ...

ನವದೆಹಲಿ: ಬಿಎಸ್ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ಸೇನೆಯಲ್ಲಿ ಯೋಧರಿಗೆ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ವಿಡಿಯೋವೊಂದನ್ನು ಹರಿಬಿಟ್ಟಿದ್ದು ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿತ್ತು. ಇದೀಗ ಸಿಆರ್ಪಿಎಫ್ ಯೋಧ ಜೀತ್ ಸಿಂಗ್ ಎಂಬುವರು ವಿಡಿಯೋ ಬಿಡುಗಡೆ ಮಾಡಿದ್ದಾರೆ. 
ಕೇಂದ್ರ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿ ಮಥುರಾ ನಿವಾಸಿ ಜೀತ್ ಸಿಂಗ್ ಅವರು ತಮ್ಮ ವಿಡಿಯೋದಲ್ಲಿ ಗೆಳೆಯರೇ ನಾನು ಕಾನ್ಸ್ಟೇಬಲ್ ಜೀತ್ ಸಿಂಗ್ ನಾನೊಬ್ಬ ಸಿಆರ್ಪಿಎಫ್ ಯೋಧ, ನಾನು ನಿಮ್ಮ ಮೂಲಕ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಗೆ ಸಂದೇಶವೊಂದನ್ನು ತಲುಪಿಸಬೇಕೆಂದಿರುವೆ. ನೀವು ನನಗೆ ನೀಡುತ್ತೀರಿ ಎಂದು ಸಂಪೂರ್ಣವಾಗಿ ನಂಬಿದ್ದೇನೆ. ನಾವು ಸಿಆರ್ಪಿಎಫ್ ಸಿಬ್ಬಂದಿ ಎಲ್ಲಾ ರೀತಿಯ ಸೇವೆಗಳನ್ನು ನೀಡುತ್ತೇವೆ. ಲೋಕಸಭೆ, ರಾಜ್ಯಸಭೆ, ವಿಐಪಿ ಮತ್ತು ವಿವಿಐಪಿ ಸೇರಿದಂತೆ ಎಲ್ಲಾ ರೀತಿಯ ಕೆಲಸಗಳನ್ನು ಮಾಡುತ್ತೇವೆ ಆದರೆ ನವಗೆ ಯಾವುದೇ ಸೌಲಭ್ಯಗಳು ಇಲ್ಲ ಎಂದು ಹೇಳಿದ್ದಾರೆ. 
ನಮ್ಮ ದೇಶದಲ್ಲಿ ಅದೆಷ್ಟು ಶಾಲೆ ಹಾಗೂ ಕಾಲೇಜುಗಳಿವೆ ಗೊತ್ತಿಲ್ಲ. ಆದರೆ ಅಲ್ಲಿ ಕೆಲಸ ಮಾಡುವ ಶಿಕ್ಷಕರಿಗೆ ತಿಂಗಳಿಗೆ ಹೆಚ್ಚು ವೇತನ, ಹಬ್ಬಹರಿದಿನಗಳಲ್ಲಿ ರಜೆ ನೀಡಲಾಗುತ್ತದೆ. ಅವರು ಹಬ್ಬದ ಸಂದರ್ಭದಲ್ಲಿ ಕುಟುಂಬದ ಜತೆ ಕಾಲ ಕಳೆಯುತ್ತಾರೆ. ಆದರೆ ಹಬ್ಬದ ದಿನಗಳಲ್ಲಿ ನಾವು ಅರಣ್ಯ ಪ್ರದೇಶ, ಹಳ್ಳಿಗಾಡಿನಲ್ಲಿ ಬಿದ್ದುಕೊಂಡಿರುತ್ತೇವೆ. ನಮಗೆ ಯಾವುದೇ ಸವಲತ್ತು, ರಜೆ ಏನು ಸಿಗುವುದಿಲ್ಲ. ನಮ್ಮ ಕಷ್ಟ ಅರ್ಥೈಸಿಕೊಳ್ಳುವವರು ಯಾರು ಇಲ್ಲ ಗೆಳೆಯರೇ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT