ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ಯೋಧರಿಗೆ ಕಳಪೆ ಆಹಾರ ಪ್ರಕರಣ: ವರದಿ ಸಲ್ಲಿಸುವಂತೆ ಗೃಹ ಸಚಿವಾಲಯಕ್ಕೆ ಪ್ರಧಾನಿ ಕಾರ್ಯಾಲಯ ಸೂಚನೆ

ದೇಶದ ಗಡಿ ಕಾಯುವ ಯೋಧಿರಿಗೆ ಕಳಪೆ ಆಹಾರ ಪೂರೈಕೆ ಮಾಡುತ್ತಿದ್ದಾರೆಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರಗತಿಯಲ್ಲಿ ವರದಿ ಸಲ್ಲಿಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಪ್ರಧಾನಮಂತ್ರಿ...

ನವದೆಹಲಿ: ದೇಶದ ಗಡಿ ಕಾಯುವ ಯೋಧಿರಿಗೆ ಕಳಪೆ ಆಹಾರ ಪೂರೈಕೆ ಮಾಡುತ್ತಿದ್ದಾರೆಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರಗತಿಯಲ್ಲಿ ವರದಿ ಸಲ್ಲಿಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಪ್ರಧಾನಮಂತ್ರಿ ಕಾರ್ಯಾಲಯ ಗುರುವಾರ ಸೂಚನೆ ನೀಡಿದೆ.

ಗಡಿ ಕಾಯುವ ಯೋಧರಿಗೆ ಅಧಿಕಾರಿಗಳು ನೀಡುತ್ತಿರುವ ಕಳಪೆ ಗುಣಮಟ್ಟದ ಆಹಾರ ಕುರಿತಂತೆ ಬಿಎಸ್ ಎಫ್ ಯೋಧರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಾಕಿ, ತಾವು ಎದುರಿಸುತ್ತಿರುವ ಪರಿಸ್ಥಿತಿಯನ್ನು ಹೇಳಿಕೊಂಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು, ಅಧಿಕಾರಿಗಳ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾಗತೊಡಗಿತ್ತು.

ಪ್ರಕರಣ ಸಂಬಂಧ ಯೋಧನ ಪತ್ನಿ ಪತಿ ತೇಜ್ ಬಹದ್ದೂರ್ ಯಾದವ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಅಲ್ಲದೆ, ಅಧಿಕಾರಿಗಳು ದೂರು ಹಿಂಪಡೆಯುವಂತೆ ಹಾಗೂ ಕ್ಷಮೆಯಾಚಿಸುವಂತೆ ಪತಿ ಮೇಲೆ ಒತ್ತಡ ಹೇರುತ್ತಿದ್ದಾರೆಂದು ಆರೋಪ ವ್ಯಕ್ತಪಡಿಸಿದ್ದರು.
 
ಎಲ್ಲಾ ಬೆಳವಣಿಗೆ ಹಿನ್ನಲೆಯಲ್ಲಿ ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯ ಮಧ್ಯಪ್ರವೇಶಿಸಿದ್ದು, ಪ್ರಕರಣ ಸಂಬಂಧ ಕೂಡಲೇ ವರದಿಸಲ್ಲಿಸುವಂತೆ ಗೃಹ ಸಚಿವಾಲಯಕ್ಕೆ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಧ್ಯಪ್ರವೇಶ ಮಾಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಯೋಧನ ಪತ್ನಿ ಶರ್ಮಿಳಾ ಅವರು, ಪ್ರಕರಣ ಸಂಬಂಧ ಪ್ರಧಾನಮಂತ್ರಿಗಳು ಮಧ್ಯಪ್ರವೇಶ ಮಾಡಿರುವುದಕ್ಕೆ ಬಹಳ ಸಂತೋಷವಾಗುತ್ತಿದೆ. ಮೋದಿಯವರ ಮಧ್ಯುಪ್ರವೇಶ ಮಾಡಬೇಕೆಂಬುದು ನನ್ನ ಪತಿಗೆ ಬೇಕಿತ್ತು. ಇದೀಗ ಅವರು ಯಶಸ್ವಿಯಾಗಿದ್ದಾರೆ. ಗಡಿ ಕಾಯುವ ಇನ್ನಿತರೆ ಯೋಧರಿಗೆ ಉತ್ತಮ ಸೌಲಭ್ಯಗಳು ಸಿಗಲಿ ಎಂಬುದು ನಮ್ಮ ಆಶಯವಾಗಿದೆ ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT