ಚಂದು ಚವ್ಹಾಣ್ 
ದೇಶ

ಯೋಧ ಚಂದು ಚವ್ಹಾಣ್ ಬಿಡುಗಡೆಗೆ ಪಾಕ್ ಬದ್ಧವಾಗಿದೆ: ಕೇಂದ್ರ ಸಚಿವ ಭಾಮ್ರೆ

ಕಳೆದ ವರ್ಷ ಆಕಸ್ಮಿಕವಾಗಿ ಭಾರತದ ಗಡಿ ದಾಟಿ ಪಾಕಿಸ್ತಾನದ ಗಡಿಯೊಳಕ್ಕೆ ಹೋಗಿ ಅಲ್ಲಿ ಸಿಕ್ಕಿಹಾಕಿಕೊಂಡಿರು ಭಾರತೀಯ ...

ಮುಂಬೈ: ಕಳೆದ ವರ್ಷ ಆಕಸ್ಮಿಕವಾಗಿ ಭಾರತದ ಗಡಿ ದಾಟಿ ಪಾಕಿಸ್ತಾನದ ಗಡಿಯೊಳಕ್ಕೆ ಹೋಗಿ ಅಲ್ಲಿ ಸಿಕ್ಕಿಹಾಕಿಕೊಂಡಿರು ಭಾರತೀಯ ಯೋಧ ಚಂದು ಚವ್ಹಾಣ್ ಅವರನ್ನು ಬಿಡುಗಡೆ ಮಾಡಲು ಪಾಕಿಸ್ತಾನ ಸೇನೆ ಬದ್ಧವಾಗಿದೆ ಎಂದು ರಕ್ಷಣಾ ಖಾತೆ ರಾಜ್ಯ ಸಚಿವ ಸುಭಾಷ್ ಭಾಮ್ರೆ ಅವರು ಗುರುವಾರ ತಿಳಿಸಿದ್ದಾರೆ.
ಇಂದು ಮುಂಬೈನಲ್ಲಿ ಭಾರತೀಯ ನೌಕಾಪಡೆಯ ಖಂಡೇರಿ ಜಲಾಂತರ್ಗಾಮಿ ನೌಕೆಯನ್ನು ದೇಶಕ್ಕೆ ಸಮರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಭಾಮ್ರೆ, ಚಂದು ಚವ್ಹಾಣ್ ಅವರನ್ನು ಶೀಘ್ರದಲ್ಲೇ ಪಾಕಿಸ್ತಾನ ಸರ್ಕಾರ ಬಿಡುಗಡೆ ಮಾಡಲಿದೆ ಎಂದು ಹೇಳಿದರು.
ಪಾಕಿಸ್ತಾನ ಗಡಿಯೊಳಕ್ಕೆ ನುಸುಳಿ ಅಲ್ಲಿ ಸೆರೆ ಸಿಕ್ಕಿರುವ ಯೋಧ ಚಂದು ಚವ್ಹಾಣ್ ಬಗ್ಗೆ ಮಾಹಿತಿ ಕಲೆಹಾಕಲು ಭಾರತದ ಸೇನಾ ಕಾರ್ಯಾಚರಣೆಗಳ ಮಹಾ ನಿರ್ದೇಶಕರು ಈವರೆಗೆ ಸುಮಾರು 15ರಿಂದ 20 ಬಾರಿ ಪಾಕಿಸ್ತಾನದ ಸೇನಾ ಕಾರ್ಯಾಚರಣೆಯ ಮಹಾ ನಿರ್ದೇಶಕರಿಗೆ ದೂರವಾಣಿ ಕರೆ ಮಾಡಿ ಮಾತಾಡಿದ್ದಾರೆ. ಆ ಪ್ರಯತ್ನಗಳಿಂದಾಗಿ ಚಂದು ಬದುಕಿರುವುದು ದೃಢಪಟ್ಟಿತ್ತು. ಇದೀಗ, ಭಾರತದ ಸತತ ಪ್ರಯತ್ನಗಳಿಂದ ಪಾಕಿಸ್ತಾನ ಶೀಘ್ರವೇ ಆತನನ್ನು ಬಿಡುಗಡೆ ಮಾಡುವುದಾಗಿ ಹೇಳಿದೆ ಎಂದರು.
ಮಹಾರಾಷ್ಟ್ರದ ಭಮ್ರೆ ಜಿಲ್ಲೆಯ ಧುಲೆ ಎಂಬ ಊರಿನ ಚಂದು ಚವ್ಹಾಣ್, 2016ರ ಸೆಪ್ಟಂಬರ್ 30ರಂದು ತಮಗರಿವಿಲ್ಲದಂತೆಯೇ ಪಾಕಿಸ್ತಾನದ ಗಡಿ ದಾಟಿ ಹೋಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT