ಸುಪ್ರೀಂ ಕೋರ್ಟ್ 
ದೇಶ

ಫೆ.6ರೊಳಗೆ 6 ಸಾವಿರ ಕೋಟಿ ಪಾವತಿಸಿ ಇಲ್ಲವೆ ಜೈಲು ಸೇರಿ: ಸಹರಾ ಮುಖ್ಯಸ್ಥನಿಗೆ ಸುಪ್ರೀಂ ಸೂಚನೆ

ಸಹಾರಾ ಸಮೂಹ ಕಂಪನಿಗಳ ಮುಖ್ಯಸ್ಥ ಸುಬ್ರತಾ ರಾಯ್‌ ಅವರಿಗೆ ಕೊನೆ ಎಚ್ಚರಿಕೆ ನೀಡಿರುವ ಸುಪ್ರೀಂ ಕೋರ್ಟ್,...

ನವದೆಹಲಿ: ಸಹಾರಾ ಸಮೂಹ ಕಂಪನಿಗಳ ಮುಖ್ಯಸ್ಥ ಸುಬ್ರತಾ ರಾಯ್‌ ಅವರಿಗೆ ಕೊನೆ ಎಚ್ಚರಿಕೆ ನೀಡಿರುವ ಸುಪ್ರೀಂ ಕೋರ್ಟ್, ಫೆಬ್ರವರಿ 6ರೊಳಗೆ 6 ಸಾವಿರ ಕೋಟಿ ಪಾವತಿಸಿ ಇಲ್ಲವೆ ಜೈಲಿಗೆ ಮರಳಿ ಎಂದು ಗುರುವಾರ ಆದೇಶಿಸಿದೆ.
ನೋಟ್ ನಿಷೇಧ ಹಾಗೂ ಆರ್ಥಿಕ ಕುಸಿತದಿಂದಾಗಿ ಹಣ ಪಾವತಿ ಅವಧಿಯನ್ನು ವಿಸ್ತರಿಸುವಂತೆ ಕೋರಿ ಸುಬ್ರತಾ ರಾಯ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಒಂದು ವೇಳೆ ಸಹರಾ ಮುಖ್ಯಸ್ಥರು ಫೆ.6ರೊಳೆಗೆ 6 ಸಾವಿರ ಕೋಟಿ ಪಾವತಿಸದಿದ್ದರೆ ಅವರೇ ಜೈಲು ಸೇರುತ್ತಾರೆ ಎಂದು ಹೇಳಿದೆ.
ಬೇರೆ ಪ್ರಕರಣಗಳಿಗಿಂತ ಈ ಪ್ರಕರಣದಲ್ಲಿ ಸುಬ್ರತಾ ರಾಯ್ ಅವರಿಗೆ ಈಗಾಗಲೇ ಸಾಕಷ್ಟು ಸಮಯ ನೀಡಲಾಗಿದೆ. ಒಂದು ನಿಗಧಿತ ಅವಧಿಯಲ್ಲಿ ಹಣ ಪಾವತಿಸದಿದ್ದರೆ ನಿಮ್ಮ ಆಸ್ತಿಯನ್ನು ಹರಾಜು ಹಾಕಬೇಕಾಗುತ್ತದೆ ಎಂದು ಸಹ ಕೋರ್ಟ್ ಎಚ್ಚರಿಸಿದೆ.
ಇದೇ ವೇಳೆ ಲಂಡನ್ ಬ್ಯಾಂಕ್ ನಲ್ಲಿರುವ 35 ಮಿಲಿಯನ್ ಪೌಂಡ್ ನ್ನು ಸೆಬಿಗೆ ವರ್ಗಾವಣೆ ಮಾಡಲು ಸಹರಾಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT