ತೆಲಂಗಾಣ ರಾಜ್ಯ ನಗರಾಭಿವೃದ್ಧಿ ಸಚಿವ ಕೆ.ಟಿ. ರಾಮ ರಾವ್ 
ದೇಶ

ಯಾವ ದೇಶದಲ್ಲೂ ಇಲ್ಲದ ಮಾನವ ಸಂಪನ್ಮೂಲ ಭಾರತದಲ್ಲಿದೆ: ಕೆ.ಟಿ. ರಾಮ ರಾವ್

ವಿಶ್ವದಲ್ಲಿ ಯಾವ ದೇಶದಲ್ಲೂ ಇಲ್ಲದ ಮಾನವ ಸಂಪನ್ಮೂಲ ಇಂದು ಭಾರತದಲ್ಲಿದೆ ಎಂದು ತೆಲಂಗಾಣ ರಾಜ್ಯ ನಗರಾಭಿವೃದ್ಧಿ ಸಚಿವ ಕೆ.ಟಿ. ರಾಮ ರಾವ್ ಅವರು ಗುರುವಾರ...

ಹೈದರಾಬಾದ್: ವಿಶ್ವದಲ್ಲಿ ಯಾವ ದೇಶದಲ್ಲೂ ಇಲ್ಲದ ಮಾನವ ಸಂಪನ್ಮೂಲ ಇಂದು ಭಾರತದಲ್ಲಿದೆ ಎಂದು ತೆಲಂಗಾಣ ರಾಜ್ಯ ನಗರಾಭಿವೃದ್ಧಿ ಸಚಿವ ಕೆ.ಟಿ. ರಾಮ ರಾವ್ ಅವರು ಗುರುವಾರ ಹೇಳಿದ್ದಾರೆ.

ಹೈದರಾಬಾದ್ ನ ರಾಮ ಕೃಷ್ಣ ಮಠದಲ್ಲಿ ಆಯೋಜನೆ ಮಾಡಿದ್ದ ರಾಷ್ಟ್ರೀಯ ಯುವಕರ ದಿನ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಈ ಹಿಂದೆ ಜನಸಂಖ್ಯಾ ಸ್ಫೋಟವನ್ನು ದೇಶದ ದೊಡ್ಡ ಸಮಸ್ಯೆಯೆಂದು ಹೇಳಲಾಗುತ್ತಿತ್ತು. ಆದರೆ, ಇಂದು ಆ ಜನಸಂಖ್ಯಾ ಸ್ಫೋಟವನ್ನೇ ದೇಶದ ವರ ಎಂದು ನೋಡುಲಾಗುತ್ತಿದೆ ಎಂದು ಹೇಳಿದ್ದಾರೆ.

ದೇಶದಲ್ಲಿರುವ ಶೇ.50 ರಷ್ಟು ಜನಸಂಖ್ಯೆಯಲ್ಲಿ 29 ಮತ್ತು 35 ವಯಸ್ಸಿನ ಅಂತರದಲ್ಲಿರುವ ಜನರೇ ಹೆಚ್ಚಾಗಿದ್ದು, ದೇಶದಲ್ಲಿ ಇಂದು ಶೇ.65 ರಷ್ಟು ಯುವಕರಿದ್ದಾರೆ. ಈ ಹಿಂದೆ ಜನಸಂಖ್ಯೆಯನ್ನೇ ದೇಶದ ದೊಡ್ಡ ಸಮಸ್ಯೆಯಾಗಿ ನೋಡಲಾಗುತ್ತಿತ್ತು. ಆದರೆ, ಇಂದು ಆ ಪರಿಸ್ಥಿತಿ ಬದಲಾಗಿದೆ. ಇದೀಗ ಅದೇ ಜನಸಂಖ್ಯೆಯನ್ನು ವರವಾಗಿ ನೋಡಲಾಗುತ್ತಿದೆ. ಇಡೀ ವಿಶ್ವದಲ್ಲಿಯೇ ಯಾವ ದೇಶದಲ್ಲೂ ಇರದ ಮಾನವ ಸಂಪನ್ಮೂಲವನ್ನು ಭಾರತ ಹೊಂದಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT