ತೆಲಂಗಾಣ ರಾಜ್ಯ ನಗರಾಭಿವೃದ್ಧಿ ಸಚಿವ ಕೆ.ಟಿ. ರಾಮ ರಾವ್ 
ದೇಶ

ಯಾವ ದೇಶದಲ್ಲೂ ಇಲ್ಲದ ಮಾನವ ಸಂಪನ್ಮೂಲ ಭಾರತದಲ್ಲಿದೆ: ಕೆ.ಟಿ. ರಾಮ ರಾವ್

ವಿಶ್ವದಲ್ಲಿ ಯಾವ ದೇಶದಲ್ಲೂ ಇಲ್ಲದ ಮಾನವ ಸಂಪನ್ಮೂಲ ಇಂದು ಭಾರತದಲ್ಲಿದೆ ಎಂದು ತೆಲಂಗಾಣ ರಾಜ್ಯ ನಗರಾಭಿವೃದ್ಧಿ ಸಚಿವ ಕೆ.ಟಿ. ರಾಮ ರಾವ್ ಅವರು ಗುರುವಾರ...

ಹೈದರಾಬಾದ್: ವಿಶ್ವದಲ್ಲಿ ಯಾವ ದೇಶದಲ್ಲೂ ಇಲ್ಲದ ಮಾನವ ಸಂಪನ್ಮೂಲ ಇಂದು ಭಾರತದಲ್ಲಿದೆ ಎಂದು ತೆಲಂಗಾಣ ರಾಜ್ಯ ನಗರಾಭಿವೃದ್ಧಿ ಸಚಿವ ಕೆ.ಟಿ. ರಾಮ ರಾವ್ ಅವರು ಗುರುವಾರ ಹೇಳಿದ್ದಾರೆ.

ಹೈದರಾಬಾದ್ ನ ರಾಮ ಕೃಷ್ಣ ಮಠದಲ್ಲಿ ಆಯೋಜನೆ ಮಾಡಿದ್ದ ರಾಷ್ಟ್ರೀಯ ಯುವಕರ ದಿನ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಈ ಹಿಂದೆ ಜನಸಂಖ್ಯಾ ಸ್ಫೋಟವನ್ನು ದೇಶದ ದೊಡ್ಡ ಸಮಸ್ಯೆಯೆಂದು ಹೇಳಲಾಗುತ್ತಿತ್ತು. ಆದರೆ, ಇಂದು ಆ ಜನಸಂಖ್ಯಾ ಸ್ಫೋಟವನ್ನೇ ದೇಶದ ವರ ಎಂದು ನೋಡುಲಾಗುತ್ತಿದೆ ಎಂದು ಹೇಳಿದ್ದಾರೆ.

ದೇಶದಲ್ಲಿರುವ ಶೇ.50 ರಷ್ಟು ಜನಸಂಖ್ಯೆಯಲ್ಲಿ 29 ಮತ್ತು 35 ವಯಸ್ಸಿನ ಅಂತರದಲ್ಲಿರುವ ಜನರೇ ಹೆಚ್ಚಾಗಿದ್ದು, ದೇಶದಲ್ಲಿ ಇಂದು ಶೇ.65 ರಷ್ಟು ಯುವಕರಿದ್ದಾರೆ. ಈ ಹಿಂದೆ ಜನಸಂಖ್ಯೆಯನ್ನೇ ದೇಶದ ದೊಡ್ಡ ಸಮಸ್ಯೆಯಾಗಿ ನೋಡಲಾಗುತ್ತಿತ್ತು. ಆದರೆ, ಇಂದು ಆ ಪರಿಸ್ಥಿತಿ ಬದಲಾಗಿದೆ. ಇದೀಗ ಅದೇ ಜನಸಂಖ್ಯೆಯನ್ನು ವರವಾಗಿ ನೋಡಲಾಗುತ್ತಿದೆ. ಇಡೀ ವಿಶ್ವದಲ್ಲಿಯೇ ಯಾವ ದೇಶದಲ್ಲೂ ಇರದ ಮಾನವ ಸಂಪನ್ಮೂಲವನ್ನು ಭಾರತ ಹೊಂದಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT