ಬಂಧನ 
ದೇಶ

ದೆಹಲಿಯಲ್ಲಿ ಇಬ್ಬರು ಭಯೋತ್ಪಾದಕರ ಬಂಧನ

ದೆಹಲಿಯ ಭಯೋತ್ಪಾದನ ನಿಗ್ರಹ ದಳ ಪೊಲೀಸರು ಇಂದು ಬೆಳಗ್ಗೆ ಕೆಸಿಪಿ ಸಂಘಟನೆಯ ಕಮಾಂಡರ್ ಮುಖ್ಯಸ್ಥ ಸೇರಿ ಇಬ್ಬರನ್ನು ಬಂಧಿಸಿದ್ದಾರೆ...

ನವದೆಹಲಿ: ದೆಹಲಿಯ ಭಯೋತ್ಪಾದನ ನಿಗ್ರಹ ದಳ ಪೊಲೀಸರು ಇಂದು ಬೆಳಗ್ಗೆ ಕೆಸಿಪಿ ಸಂಘಟನೆಯ ಕಮಾಂಡರ್ ಮುಖ್ಯಸ್ಥ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.

ಪೂರ್ವ ದೆಹಲಿಯ ಮಯೂರ್ ವಿಹಾರದಲ್ಲಿ ನೆಲೆಸಿದ್ದ ಕಮಾಂಡರ್ ರಂಜಿತ್ ಅಲಿಯಾಸ್ ರಿಕಿ ಎಂಬಾತನನ್ನು ಬಂಧಿಸಿದ್ದಾರೆ. ಇದೇ ವೇಳೆ ರಂಜಿತ್ ಜತೆ ನೆಲೆಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಮಣಿಪುರದಲ್ಲಿ ನಡೆದ ಹಲವು ಉಗ್ರ ದಾಳಿಗಳ ರೂವಾರಿಯಾಗಿದ್ದ ರಂಜಿತ್ . ಯಾರನ್ನೊ ಭೇಟಿ ಮಾಡಲು ಮಹಿಳೆಯೊಂದಿಗೆ ಸೇರಿ ದೆಹಲಿಗೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ರಂಜಿತ್ ನನ್ನು ಇಂದು ಮಧ್ಯಾಹ್ನ ಕೋರ್ಟ್ ಗೆ ಹಾಜರುಪಡಿಸುವುದಾಗಿ ಪೊಲೀಸರು ಹೇಳಿದ್ದಾರೆ. ಕೆಸಿಪಿ ಉಗ್ರ ಸಂಘಟನೆ 2012ರ ಬಳಿಕ ಕಾರ್ಯಾರಂಭಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿವಿ ಘಟಿಕೋತ್ಸವಕ್ಕೆ CJI ಸೂರ್ಯಕಾಂತ್ ಗೆ ಆಹ್ವಾನ: ಅವರಿಂದ ಪದವಿಪತ್ರ ಸ್ವೀಕರಿಸಲ್ಲ ಎಂದ NALSAR ವಿದ್ಯಾರ್ಥಿಗಳು!

ಅಮೆರಿಕದ ಜೊತೆ ನೇರ ಮಾತುಕತೆ ಇಲ್ಲ: ಇರಾನ್ ವಿದೇಶಾಂಗ ಸಚಿವ ಅರಾಘ್ಚಿ ಸ್ಪಷ್ಟನೆ

ಬಾರಾಮತಿಯಲ್ಲಿ ಮತ್ತೆ ತರಬೇತಿ ವಿಮಾನ ಪತನ; ಅಜಿತ್ ಪವಾರ್ ದುರಂತದ ಬಳಿಕ 2ನೇ ಘಟನೆ

ಸೆಲ್ಫಿ ಕೇಳಿ ಬಂದ ಮಹಿಳಾ ಅಭಿಯಾನಿಯಿಂದ 'ಲಿಪ್ ಲಾಕ್': ತಬ್ಬಿಬ್ಬಾದ ಬಾಲಿವುಡ್ ನಟಿ ನಿಕಿತಾ ರಾವಲ್, Video ವೈರಲ್

ಕೋಲ್ಕತ್ತಾ ಬಳಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಇಟ್ಟಿಗೆ, ಕಲ್ಲುಗಳಿಂದ ದಾಳಿ: 'ಪ್ರಾಣವೇ ಹೋಗಬೇಕಾಗಿತ್ತು' ಎಂದ ಮಾಜಿ ಸಿಎಂ!