ಬಂಧನ 
ದೇಶ

ದೆಹಲಿಯಲ್ಲಿ ಇಬ್ಬರು ಭಯೋತ್ಪಾದಕರ ಬಂಧನ

ದೆಹಲಿಯ ಭಯೋತ್ಪಾದನ ನಿಗ್ರಹ ದಳ ಪೊಲೀಸರು ಇಂದು ಬೆಳಗ್ಗೆ ಕೆಸಿಪಿ ಸಂಘಟನೆಯ ಕಮಾಂಡರ್ ಮುಖ್ಯಸ್ಥ ಸೇರಿ ಇಬ್ಬರನ್ನು ಬಂಧಿಸಿದ್ದಾರೆ...

ನವದೆಹಲಿ: ದೆಹಲಿಯ ಭಯೋತ್ಪಾದನ ನಿಗ್ರಹ ದಳ ಪೊಲೀಸರು ಇಂದು ಬೆಳಗ್ಗೆ ಕೆಸಿಪಿ ಸಂಘಟನೆಯ ಕಮಾಂಡರ್ ಮುಖ್ಯಸ್ಥ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.

ಪೂರ್ವ ದೆಹಲಿಯ ಮಯೂರ್ ವಿಹಾರದಲ್ಲಿ ನೆಲೆಸಿದ್ದ ಕಮಾಂಡರ್ ರಂಜಿತ್ ಅಲಿಯಾಸ್ ರಿಕಿ ಎಂಬಾತನನ್ನು ಬಂಧಿಸಿದ್ದಾರೆ. ಇದೇ ವೇಳೆ ರಂಜಿತ್ ಜತೆ ನೆಲೆಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಮಣಿಪುರದಲ್ಲಿ ನಡೆದ ಹಲವು ಉಗ್ರ ದಾಳಿಗಳ ರೂವಾರಿಯಾಗಿದ್ದ ರಂಜಿತ್ . ಯಾರನ್ನೊ ಭೇಟಿ ಮಾಡಲು ಮಹಿಳೆಯೊಂದಿಗೆ ಸೇರಿ ದೆಹಲಿಗೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ರಂಜಿತ್ ನನ್ನು ಇಂದು ಮಧ್ಯಾಹ್ನ ಕೋರ್ಟ್ ಗೆ ಹಾಜರುಪಡಿಸುವುದಾಗಿ ಪೊಲೀಸರು ಹೇಳಿದ್ದಾರೆ. ಕೆಸಿಪಿ ಉಗ್ರ ಸಂಘಟನೆ 2012ರ ಬಳಿಕ ಕಾರ್ಯಾರಂಭಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT