ಸಿಬಿಐ (ಸಂಗ್ರಹ ಚಿತ್ರ) 
ದೇಶ

ಕಲ್ಲಿದ್ದಲು ಹಗರಣ: ನವೀನ್ ಜಿಂದಾಲ್ ವಿರುದ್ಧ ಸಿಬಿಐನಿಂದ ಅಂತಿಮ ವರದಿ ಸಲ್ಲಿಕೆ

ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಉದ್ಯಮಿ, ಕಾಂಗ್ರೆಸ್ ನಾಯಕ ನವೀನ್ ಜಿಂದಾಲ್, ಕಲ್ಲಿದ್ದಲು ಖಾತೆ ಮಾಜಿ ರಾಜ್ಯ ಸಚಿವ ದಸರಿ ನಾರಾಯಣ್ ರಾವ್ ವಿರುದ್ಧ ಸಿಬಿಐ ಅಂತಿಮ ವರದಿ ಸಲ್ಲಿಸಿದೆ.

ನವದೆಹಲಿ:ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಉದ್ಯಮಿ, ಕಾಂಗ್ರೆಸ್ ನಾಯಕ ನವೀನ್ ಜಿಂದಾಲ್, ಕಲ್ಲಿದ್ದಲು ಖಾತೆ ಮಾಜಿ ರಾಜ್ಯ ಸಚಿವ ದಸರಿ ನಾರಾಯಣ್ ರಾವ್ ವಿರುದ್ಧ ಸಿಬಿಐ ಅಂತಿಮ ವರದಿ ಸಲ್ಲಿಸಿದೆ. 
ವಿಶೇಷ ನ್ಯಾಯಾಲಯದ ನಿರ್ದೇಶನದಂತೆ ಸಿಬಿಐ ಹೆಚ್ಚಿನ ತನಿಖೆ ನಡೆಸಿದ್ದು, ಅಂತಿಮ ವರದಿ ಸಲ್ಲಿಸಿದೆ. ಆದರೆ ಸರಿಯಾದ ಕ್ರಮದಲ್ಲಿ ವರದಿ ಸಲ್ಲಿಸದೇ ಇರುವ ತನಿಖಾಧಿಕಾರಿಯ ನಡೆಯನ್ನು ಕೋರ್ಟ್ ಆಕ್ಷೇಪಿಸಿದ್ದು, ಜ.23 ರೊಳಗೆ ಸರಿಯಾದ ಸ್ವರೂಪದಲ್ಲಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. 
ಸಿಬಿಐ ಜ.13 ರಂದು ಸಲ್ಲಿಸಿರುವ ವರದಿಯಲ್ಲಿ ಕೇಂದ್ರ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯ ಅಂಶಗಳು, ಸಾಕ್ಷಿಗಳ ಪಟ್ಟಿ ಹಾಗೂ ದಾಖಲಾಗಿರುವ ಅವರ ಹೇಳಿಕೆಗಳಿವೆ. ಅಂತಿಮ ವರದಿ ಸಲ್ಲಿಸುವುದು ವಿಳಂಬವಾಗುತ್ತಿರುವುದು  ಪ್ರಕರಣದ ವಿಚಾರಣೆಯ ಪ್ರಗತಿಗೆ ಅಡ್ಡಿ ಉಂಟುಮಾಡುತ್ತಿದೆ ಎಂದು ಕೋರ್ಟ್ ಈ ಹಿಂದೆ ಸಿಬಿಐ ನ್ನು ತರಾಟೆಗೆ ತೆಗೆದುಕೊಂಡಿತ್ತು. 
ಕಲ್ಲಿದ್ದಲು ಹಗರಣ ಪ್ರಕರಣದ ಆರೋಪಿಗಳಲ್ಲೊಬ್ಬರಾದ ಸುರೇಶ್‌ ಸಿಂಘಾಲ್‌ ಚಾರ್ಟರ್ಡ್ ಅಕೌಂಟೆಂಟ್ ಸುರೇಶ್ ಸಿಂಘಾಲ್ ಹೆಚ್ಚಿನ ಮಾಹಿತಿ ಬಹಿರಂಗಪಡಿಸಿದ್ದ ಹಿನ್ನೆಲೆಯಲ್ಲಿ ಮತ್ತಷ್ಟು ತನಿಖೆ ನಡೆಸಲು ಸಿಬಿಐ ಹೆಚ್ಚಿನ ಕಾಲಾವಕಾಶ ಕೋರಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT