ಸಿಬಿಐ (ಸಂಗ್ರಹ ಚಿತ್ರ) 
ದೇಶ

ಕಲ್ಲಿದ್ದಲು ಹಗರಣ: ನವೀನ್ ಜಿಂದಾಲ್ ವಿರುದ್ಧ ಸಿಬಿಐನಿಂದ ಅಂತಿಮ ವರದಿ ಸಲ್ಲಿಕೆ

ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಉದ್ಯಮಿ, ಕಾಂಗ್ರೆಸ್ ನಾಯಕ ನವೀನ್ ಜಿಂದಾಲ್, ಕಲ್ಲಿದ್ದಲು ಖಾತೆ ಮಾಜಿ ರಾಜ್ಯ ಸಚಿವ ದಸರಿ ನಾರಾಯಣ್ ರಾವ್ ವಿರುದ್ಧ ಸಿಬಿಐ ಅಂತಿಮ ವರದಿ ಸಲ್ಲಿಸಿದೆ.

ನವದೆಹಲಿ:ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಉದ್ಯಮಿ, ಕಾಂಗ್ರೆಸ್ ನಾಯಕ ನವೀನ್ ಜಿಂದಾಲ್, ಕಲ್ಲಿದ್ದಲು ಖಾತೆ ಮಾಜಿ ರಾಜ್ಯ ಸಚಿವ ದಸರಿ ನಾರಾಯಣ್ ರಾವ್ ವಿರುದ್ಧ ಸಿಬಿಐ ಅಂತಿಮ ವರದಿ ಸಲ್ಲಿಸಿದೆ. 
ವಿಶೇಷ ನ್ಯಾಯಾಲಯದ ನಿರ್ದೇಶನದಂತೆ ಸಿಬಿಐ ಹೆಚ್ಚಿನ ತನಿಖೆ ನಡೆಸಿದ್ದು, ಅಂತಿಮ ವರದಿ ಸಲ್ಲಿಸಿದೆ. ಆದರೆ ಸರಿಯಾದ ಕ್ರಮದಲ್ಲಿ ವರದಿ ಸಲ್ಲಿಸದೇ ಇರುವ ತನಿಖಾಧಿಕಾರಿಯ ನಡೆಯನ್ನು ಕೋರ್ಟ್ ಆಕ್ಷೇಪಿಸಿದ್ದು, ಜ.23 ರೊಳಗೆ ಸರಿಯಾದ ಸ್ವರೂಪದಲ್ಲಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. 
ಸಿಬಿಐ ಜ.13 ರಂದು ಸಲ್ಲಿಸಿರುವ ವರದಿಯಲ್ಲಿ ಕೇಂದ್ರ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯ ಅಂಶಗಳು, ಸಾಕ್ಷಿಗಳ ಪಟ್ಟಿ ಹಾಗೂ ದಾಖಲಾಗಿರುವ ಅವರ ಹೇಳಿಕೆಗಳಿವೆ. ಅಂತಿಮ ವರದಿ ಸಲ್ಲಿಸುವುದು ವಿಳಂಬವಾಗುತ್ತಿರುವುದು  ಪ್ರಕರಣದ ವಿಚಾರಣೆಯ ಪ್ರಗತಿಗೆ ಅಡ್ಡಿ ಉಂಟುಮಾಡುತ್ತಿದೆ ಎಂದು ಕೋರ್ಟ್ ಈ ಹಿಂದೆ ಸಿಬಿಐ ನ್ನು ತರಾಟೆಗೆ ತೆಗೆದುಕೊಂಡಿತ್ತು. 
ಕಲ್ಲಿದ್ದಲು ಹಗರಣ ಪ್ರಕರಣದ ಆರೋಪಿಗಳಲ್ಲೊಬ್ಬರಾದ ಸುರೇಶ್‌ ಸಿಂಘಾಲ್‌ ಚಾರ್ಟರ್ಡ್ ಅಕೌಂಟೆಂಟ್ ಸುರೇಶ್ ಸಿಂಘಾಲ್ ಹೆಚ್ಚಿನ ಮಾಹಿತಿ ಬಹಿರಂಗಪಡಿಸಿದ್ದ ಹಿನ್ನೆಲೆಯಲ್ಲಿ ಮತ್ತಷ್ಟು ತನಿಖೆ ನಡೆಸಲು ಸಿಬಿಐ ಹೆಚ್ಚಿನ ಕಾಲಾವಕಾಶ ಕೋರಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT