ಸೇನಾ ಮುಖ್ಯಸ್ಥ ಬಿಪಿನ್ ರಾವತ್ 
ದೇಶ

ಯುದ್ಧಭೂಮಿಯಲ್ಲಿ ಮಹಿಳೆಯರು ಹೆಚ್ಚುವರಿ ಸೌಲಭ್ಯ ಕೇಳುವಂತಿಲ್ಲ: ಸೇನಾ ಮುಖ್ಯಸ್ಥ ಬಿಪಿನ್ ರಾವತ್

ಯುದ್ಧಭೂಮಿಯ ಮುಂಚೂಣಿಯಲ್ಲಿರಲು ಬಯಸಿದರೆ ಮಹಿಳೆಯರು ಹೆಚ್ಚುವರಿ ಸೌಲಭ್ಯಗಳನ್ನು ಕೇಳುವಂತಿಲ್ಲ ಎಂದಿದ್ದಾರೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್

ನವದೆಹಲಿ: ಸಮಾನ ಅವಕಾಶಗಳನ್ನು ಪಡೆಯುವವರು ಅದಕ್ಕೆ ಸಮನಾದ ಜವಾಬ್ದಾರಿಯನ್ನೂ ನಿರ್ವಹಿಸಲು ಸಿದ್ಧವಿರಬೇಕೆಂಬುದನ್ನು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೂಚ್ಯವಾಗಿ ತಿಳಿಸಿದ್ದು, ಯುದ್ಧಭೂಮಿಯ ಮುಂಚೂಣಿಯಲ್ಲಿರಲು ಬಯಸಿದರೆ ಮಹಿಳೆಯರು ಹೆಚ್ಚುವರಿ ಸೌಲಭ್ಯಗಳನ್ನು ಕೇಳುವಂತಿಲ್ಲ ಎಂದಿದ್ದಾರೆ. 
ಯೋಧರು ಕೆಲವೊಮ್ಮೆ ಸೇನಾ ಟ್ಯಾಂಕ್ ಗಳಲ್ಲೆ ಮಲಗಿ ಅಲ್ಲೇ ಅಡುಗೆ ಸಿದ್ಧಪಡಿಸಿಕೊಳ್ಳುತ್ತಾರೆ ಎಂದಿರುವ ಬಿಪಿನ್ ರಾವತ್, ಗಸ್ತು ತಿರುಗುವ ವೇಳೆ ಅನೇಕ ಬಾರಿ ಶೌಚಾಲಯದ ವ್ಯವಸ್ಥೆಯೂ ಇರುವುದಿಲ್ಲ, ಇಡೀ ಸಮಾಜದ ದೃಶ್ಟಿಯಿಂದ ಈ ಎಲ್ಲಾ ಅಂಶಗಳನ್ನು ಪರಿಗಣಿಸಬೇಕಾಗಿದೆ. ಒಂದು ವೇಳೆ ಯುದ್ಧಭೂಮಿಯಲ್ಲಿ ಮಹಿಳೆಯರಿಗೆ ಮುಂಚೂಣಿ ಸ್ಥಾನ ನೀಡಿದರೆ, ಪುರುಷರಂತೆಯೇ ಮಹಿಳೆಯರೂ ಸಮಾನವಾದ ಜವಾಬ್ದಾರಿಗಳನ್ನು ನಿರ್ವಹಿಸಬೇಕಾಗುತ್ತದೆ ಅರ್ಥಾತ್ ಪುರುಷರು ಹೇಗೆ ಕಾರ್ಯನಿರ್ವಹಿಸುತ್ತಾರೋ ಹಾಗೆಯೇ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದು ಬಿಪಿನ್ ರಾವತ್ ತಿಳಿಸಿದ್ದಾರೆ. 
ಕೆಲವೊಮ್ಮೆ ಒಂದು ಯುನಿಟ್ ನ 3-4 ಯೋಧರು ಒಟ್ಟಿಗೆ ಟ್ಯಾಂಕ್ ಗಳಲ್ಲೇ ಇರುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಒಮ್ಮೊಮ್ಮೆ ಮಹಿಳಾ ಯೋಧರು ಪುರುಷ ಯೋಧರು ಒಟ್ಟಿಗೆ ಇರಬೇಕಾದ ಅನಿವಾರ್ಯತೆ ಎದುರಾಗುತ್ತದೆ. 
ಯುದ್ಧಭೂಮಿಯಲ್ಲಿ ಸಕ್ರಿಯರಾಗಲು ಬಯಸುತ್ತಿರುವ ಮಹಿಳೆಯರು ಸ್ವತಃ ಯೋಚಿಸಿ ನಿರ್ಧಾರ ಕೈಗೊಳ್ಳಬೇಕಿದೆ, ಸೇನೆಗೆ ಸೇರಲು ಬಯಸುವ ಮಹಿಳೆಯರು ಈ ಬಗ್ಗೆ  ತಮ್ಮ ನಿರ್ಧಾರವನ್ನು ಪ್ರಕಟಿಸಿದರೆ ಯುದ್ಧಭೂಮಿಯಲ್ಲಿ ಮಹಿಳೆಯರಿಗೆ ಮುಂಚೂಣಿ ಸ್ಥಾನ ನೀಡುವುದರ ಬಗ್ಗೆ ನಾವೂ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಬಿಪಿನ್ ರಾವತ್ ತಿಳಿಸಿದ್ದಾರೆ. 
ಸೇನೆಯ ಇಂಜಿನಿಯರಿಂಗ್, ಸಿಗ್ನಲ್ ವಿಭಾಗಗಳಲ್ಲಿ ಮಹಿಳೆಯರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಒಂದು ಹೆಜ್ಜೆ ಮುಂದಿರುವ ವಾಯುಪಡೆ ಯುದ್ಧ ವಿಮಾನಗಳಿಗೆ ಮಹಿಳಾ ಪೈಲಟ್ ಗಳನ್ನು ನೇಮಕ ಮಾಡಿಕೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT