ಉಗ್ರರ ಅಡಗುತಾಣಗಳ ಮೇಲೆ ಸೇನೆ ದಾಳಿ, ಭಾರಿ ಪ್ರಮಾಣ ಶಸ್ತ್ರಾಸ್ತ್ರಗಳು ವಶಕ್ಕೆ 
ದೇಶ

ಜಮ್ಮು-ಕಾಶ್ಮೀರ: ಉಗ್ರರ ಅಡಗುತಾಣಗಳ ಮೇಲೆ ಸೇನೆ ದಾಳಿ, ಭಾರೀ ಪ್ರಮಾಣ ಶಸ್ತ್ರಾಸ್ತ್ರಗಳು ವಶಕ್ಕೆ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿದ್ದ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ್ದು, ಭಾರೀ ಪ್ರಮಾಣ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಶನಿವಾರ...

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿದ್ದ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ್ದು, ಭಾರೀ ಪ್ರಮಾಣ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಶನಿವಾರ ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರದ ರಜೌರಿ, ಸುರಾನ್ಕೋಟ್, ಮಂಧಾನ್, ಮಂಡಿ ಮತ್ತು ಠಾಣಾ ಮಂಡಿ ಸೇರಿದಂತೆ ಇನ್ನಿತರೆ ಬೆಟ್ಟ ಮತ್ತು ಅರಣ್ಯ ಪ್ರದೇಶಗಳಲ್ಲಿದ್ದ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, 4-5 ದಿನಗಳ ಕಾಲ ನಡೆಸಿದ ಈ ಕಾರ್ಯಾಚರಣೆಯಲ್ಲಿ ಪೂಂಚ್ ಜಿಲ್ಲೆಯ ಸುರಾನ್ಕೋಟ್ ನ ಛಾರ್ಮಾರ್ ಪ್ರದೇಶದಲ್ಲಿ ಉಗ್ರರು ಅಡಗಿಸಿಟ್ಟಿದ್ದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

2 ಎಕೆ 56 ರೈಫಲ್, 2 ಆರ್'ಪಿಜಿಗಳು, 2 9 ಎಂಎಂ ಪಿಸ್ತೂಲ್ ಗಳು, 302 ಸುತ್ತಿನ ಗುಂಡುಗಳು, 10 ನಿಯತಕಾಲಿಕೆಗಳು, ಚೀನಾ ಮೂಲದ ಗ್ರೆನೇಡ್ ಗಳು, 9 ಎಂಎಂ ಪಿಸ್ತೂಲಿನೊಂದಿಗೆ ಮೂರು ಸುತ್ತಿನ ಗುಂಡುಗಳು, 88 ಸುತ್ತಿನ ಮಷಿನ್ ಗನ್ ಗಳು, 12 ಸುತ್ತಿನ ಸ್ನಿಪರ್ ರೈಫಲ್, ಆ್ಯಂಟಿ ಟ್ಯಾಂಕ್ ರೈಫಲ್ ಗ್ರೆನೇಡ್ ಮತ್ತು ಮಾರ್ಟರ್ ಶೆಲ್ ಗಳನ್ನು ಸೇನೆ ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ.

ಸೇನೆ ಈ ಕಾರ್ಯಾಚರಣೆ ಉಗ್ರರಿಗೆ ಭಾರೀ ಹೊಡೆತವನ್ನು ನೀಡಿದ್ದು, ಪ್ರಸ್ತುತ ಸ್ಥಳದಲ್ಲಿ ಸೇನೆ ತನ್ನ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT