ಹಿರಿಯ ಅಧಿಕಾರಿಗಳ ವಿರುದ್ಧ ಆರೋಪ ಮಾಡಿದ್ದ ಯೋಧ ತೇಜ್ ಬಹದ್ದೂರ್ ಯಾದವ್ 
ದೇಶ

ಯೋಧನ ಆರೋಪದಲ್ಲಿ ಹುರುಳಿಲ್ಲ: ಪಿಎಂಒಗೆ ಗೃಹ ಸಚಿವಾಲಯ ಮಾಹಿತಿ

ಗಡಿ ಕಾಯುವ ಯೋಧರಿಗೆ ನೀಡುವ ಆಹಾರದಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ನಡೆಸುತ್ತಿದ್ದು, ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ನೀಡುತ್ತಿದ್ದಾರೆಂದು ಹೇಳಿಕೊಂಡಿದ್ದ ಯೋಧನ ಆರೋಪದಲ್ಲಿ ಯಾವುದೇ ರೀತಿಯ ಸತ್ಯಾಂಶವಿಲ್ಲ ಎಂದು ಪ್ರಧಾನಮಂತ್ರಿ ಕಾರ್ಯಾಲಯಕ್ಕೆ...

ನವದೆಹಲಿ: ಗಡಿ ಕಾಯುವ ಯೋಧರಿಗೆ ನೀಡುವ ಆಹಾರದಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ನಡೆಸುತ್ತಿದ್ದು, ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ನೀಡುತ್ತಿದ್ದಾರೆಂದು ಹೇಳಿಕೊಂಡಿದ್ದ ಯೋಧನ ಆರೋಪದಲ್ಲಿ ಯಾವುದೇ ರೀತಿಯ ಸತ್ಯಾಂಶವಿಲ್ಲ ಎಂದು ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ಗೃಹ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ಗಡಿ ಕಾಯುವ ಯೋಧರಿಗೆ ಅಧಿಕಾರಿಗಳು ನೀಡುತ್ತಿರುವ ಕಳಪೆ ಗುಣಮಟ್ಟದ ಆಹಾರ ಕುರಿತಂತೆ ಬಿಎಸ್ ಎಫ್ ಯೋಧರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಾಕಿ, ತಾವು ಎದುರಿಸುತ್ತಿರುವ ಪರಿಸ್ಥಿತಿಯನ್ನು ಹೇಳಿಕೊಂಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು, ಅಧಿಕಾರಿಗಳ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾಗತೊಡಗಿತ್ತು.

ಪ್ರಕರಣ ಸಂಬಂಧ ಯೋಧನ ಪತ್ನಿ ಪತಿ ತೇಜ್ ಬಹದ್ದೂರ್ ಯಾದವ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಅಲ್ಲದೆ, ಅಧಿಕಾರಿಗಳು ದೂರು ಹಿಂಪಡೆಯುವಂತೆ ಹಾಗೂ ಕ್ಷಮೆಯಾಚಿಸುವಂತೆ ಪತಿ ಮೇಲೆ ಒತ್ತಡ ಹೇರುತ್ತಿದ್ದಾರೆಂದು ಆರೋಪ ವ್ಯಕ್ತಪಡಿಸಿದ್ದರು.

ಎಲ್ಲಾ ಬೆಳವಣಿಗೆ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯ ಮಧ್ಯಪ್ರವೇಶಿಸಿ ಮಾಡಿ, ಪ್ರಕರಣ ಸಂಬಂಧ ಕೂಡಲೇ ವರದಿಸಲ್ಲಿಸುವಂತೆ ಗೃಹ ಸಚಿವಾಲಯಕ್ಕೆ ಸೂಚನೆ ನೀಡಿತ್ತು.

ಇದರಂತೆ ಇಂದು ಪ್ರಧಾನಮಂತ್ರಿಗಳ ಕಾರ್ಯಾಲಯಕ್ಕೆ ವರದಿ ಸಲ್ಲಿಸಿರುವ ಗೃಹ ಸಚಿವಾಲಯ, ಯೋಧನ ಆರೋಪದಲ್ಲಿ ಯಾವುದೇ ರೀತಿಯ ಹುರುಳಿಲ್ಲ. ಯೋಧರಿಗೆ ನೀಡುವ ಆಹಾರದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸುವಂತಹದ್ದೇನು ಇರಲಿಲ್ಲ. ಯೋಧರಿಗೆ ನೀಡಿರುವ ಪಡಿತರದಲ್ಲೂ ಯಾವುದೇ ರೀತಿಯ ಕೊರತೆಯಿಲ್ಲ. ಪ್ರತೀನಿತ್ಯ ಆಹಾರದ ಗುಣಮಟ್ಟತೆಯನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿಕೊಂಡಿದೆ.

ಇನ್ನು ಗೃಹ ಸಚಿವಾಲಯಕ್ಕೆ ಪ್ರಧಾನಮಂತ್ರಿಗಳ ಕಾರ್ಯಾಲಯ ಸೂಚನೆಯೊಂದನ್ನು ನೀಡಿದ್ದು, ಯೋಧರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ಯೋಧರ ಪರಿಸ್ಥಿತಿ ಸುಧಾರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಿ ಎಂದು ತಿಳಿಸಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT