ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ದೇಶದ ಜನತೆಗೆ ಮಕರ ಸಂಕ್ರಾಂತಿ, ಪೊಂಗಲ್ ಶುಭಾಶಯ ಕೋರಿದ ಪ್ರಧಾನಿ ಮೋದಿ

ದೇಶದಾದ್ಯಂತ ಮಕರ ಸಂಕ್ರಾಂತಿ, ಪೊಂಗಲ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು...

ನವದೆಹಲಿ: ದೇಶದಾದ್ಯಂತ ಮಕರ ಸಂಕ್ರಾಂತಿ, ಪೊಂಗಲ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಟ್ವಿಟರ್ ನಲ್ಲಿ ಶುಭಾಶಯಗಳನ್ನು ಕೋರಿರುವ ಪ್ರಧಾನಿ ಮೋದಿಯವರು, ಇಂದು ಭಾರತದಾದ್ಯಂತ ಜನರು ವಿವಿಧ ರೀತಿಯ ಹಬ್ಬಗಳನ್ನು ಆಚರಿಸುತ್ತಿದ್ದು, ಹಬ್ಬದ ಸಂಭ್ರದಲ್ಲಿರುವ ಜನತೆಗೆ ಈ ಮೂಲಕ ಶುಭಾಶಯಗಳನ್ನು ಕೋರುತ್ತಿದ್ದೇನೆಂದು ಹೇಳಿದ್ದಾರೆ.

ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು, ಈ ಬಾರಿಯ ಹಬ್ಬ ನಿಮ್ಮೆಲ್ಲರಿಗೂ ಸಂತೋಷ ಹಾಗೂ ಐಶ್ವರ್ಯವನ್ನು ನೀಡಲಿ ಎಂದು ತಿಳಿಸಿದ್ದಾರೆ.

ತಮಿಳುನಾಡಿನ ಸ್ನೇಹಿತರು ಪೊಂಗಲ್ ಹಬ್ಬವನ್ನು ಆಚರಿಸುತ್ತಿದ್ದು, ಈ ಮೂಲಕ ಪೊಂಗಲ್ ಹಬ್ಬದ ಶುಭಾಶಯಗಳನ್ನು ಕೋರುತ್ತಿದ್ದೇನೆಂದು ಹೇಳಿದ್ದಾರೆ.

ಅಸ್ಸಾಂ ರಾಜ್ಯದಲ್ಲಿ 'ಮಾಘ ಬಿಹು' ಹಬ್ಬವನ್ನು ಆಚರಿಸಲಾಗುತ್ತಿದ್ದು, ಅಸ್ಸಾಂ ಜನತೆಗೆ ಶುಭಾಶಯಗಳನ್ನು ಕೋರುತ್ತಿದ್ದೇನೆ.

ಈ ಎಲ್ಲಾ ಹಬ್ಬಗಳಲ್ಲದೆ, ಭಾರತದ ಇನ್ನಿತರೆ ಪ್ರದೇಶಗಳಲ್ಲೂ ವಿವಿಧ ಹಬ್ಬಗಳನ್ನು ಆಚರಿಸಲಾಗಿತ್ತಿದ್ದು, ಈ ಬಾರಿಯ ಹಬ್ಬ ಎಲ್ಲರ ಜೀವನದಲ್ಲೂ ಬಣ್ಣ ಹಾಗೂ ಸಂತೋಷವನ್ನು ನೀಡಲಿ. ಭಾರತದಲ್ಲಿರುವ ವೈವಿಧ್ಯತೆಯೇ ದೊಡ್ಡ ಶಕ್ತಿಯಾಗಿದೆ. ಈ ಬಾರಿಯ ಹಬ್ಬ ಶ್ರಮದಾಯಕ ರೈತರಿಗೆ ಸಂತೋಷ ಹಾಗೂ ಐಶ್ವರ್ಯವನ್ನು ನೀಡಲಿ ಎಂದು ಶುಭಾಶಯ ಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT