ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾವದ್ ಹಾಗೂ ಅವರ ಮಗ ಅಖಿಲೇಶ್ ಯಾದವ್ 
ದೇಶ

ನಾಟಕ ಕಂಪನಿಯಾಗಿ ಪರಿವರ್ತನೆಗೊಳ್ಳುತ್ತಿದೆ ಸಮಾಜವಾದಿ ಪಕ್ಷ: ಬಿಎಸ್'ಪಿ

ಉತ್ತರಪ್ರದೇಶದ ಆಡಳಿತಾರೂಢ ಸರ್ಕಾರ ಜನರನ್ನು ಮೂರ್ಖರನ್ನಾಗಿಸುವ ಪ್ರಯತ್ನಗಳನ್ನು ಮಾಡುತ್ತಿದ್ದು, ದಿನಕಳೆಯುತ್ತಿದ್ದಂತೆ ಸಮಾಜವಾದಿ ಪಕ್ಷ ನಾಟಕದ ಕಂಪನಿಯಂತೆ ಪರಿವರ್ತನೆಗೊಳ್ಳುತ್ತಿದೆ ಎಂದು ಬಹುಜನ ಸಮಾಜ ಪಕ್ಷ...

ನವದೆಹಲಿ: ಉತ್ತರಪ್ರದೇಶದ ಆಡಳಿತಾರೂಢ ಸರ್ಕಾರ ಜನರನ್ನು ಮೂರ್ಖರನ್ನಾಗಿಸುವ ಪ್ರಯತ್ನಗಳನ್ನು ಮಾಡುತ್ತಿದ್ದು, ದಿನಕಳೆಯುತ್ತಿದ್ದಂತೆ ಸಮಾಜವಾದಿ ಪಕ್ಷ ನಾಟಕದ ಕಂಪನಿಯಂತೆ ಪರಿವರ್ತನೆಗೊಳ್ಳುತ್ತಿದೆ ಎಂದು ಬಹುಜನ ಸಮಾಜ ಪಕ್ಷ ಶನಿವಾರ ವ್ಯಂಗ್ಯವಾಡಿದೆ.

ಈ ಕುರಿತಂತೆ ಮಾತನಾಡಿರುವ ಬಿಎಸ್ ಪಿ ಪಕ್ಷದ ನಾಯಕ ಸುಧೀಂದ್ರ ಭಡೋರಿಯಾ ಅವರು, ರಾಜ್ಯದಲ್ಲಿ ಆಡಳಿತ ಹಾಗೂ ಅಭಿವೃದ್ಧಿಯನ್ನು ಮಾಡುತ್ತಿಲ್ಲ. ಜನರನ್ನು ಮೂರ್ಖರನ್ನಾಗಿಸುವ ಪ್ರಯತ್ನಗಳನ್ನು ಮಾಡುತ್ತಿದೆ. ಸಮಾಜವಾದಿ ಪಕ್ಷ ನಾಟಕದ ಕಂಪನಿಯಂತೆ ಪರಿವರ್ತನೆಗೊಳ್ಳುತ್ತಿದೆ. ಚುನಾವಣಾ ಆಯೋಗ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಿ ಆದರೆ, ಉತ್ತರಪ್ರದೇಶ ಜನತೆ ಮಾತ್ರ ಸಮಾಜವಾದಿ ಪಕ್ಷವನ್ನು ತಿರಸ್ಕರಿಸಿದ್ದಾರೆಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾವದ್ ಹಾಗೂ ಅವರ ಮಗ ಅಖಿಲೇಶ್ ಯಾದವ್ ಅವರು ಕೇವಲ ಅವರ ಬಗ್ಗೆಯಷ್ಟೇ ಆಲೋಚನೆ ಮಾಡುತ್ತಿದ್ದಾರೆ. ರಾಜ್ಯ ಅಭಿವೃದ್ಧಿ ಕಡೆಗೆ ಅವರು ಗಮನ ನೀಡುತ್ತಿಲ್ಲ. ಉತ್ತರಪ್ರದೇಶ ರಾಜ್ಯ ಅಭಿವೃದ್ಧಿಯೊಂದಿಗೆ ತಾವು ಏನನ್ನೂ ಮಾಡುವುದಿಲ್ಲ ಎಂಬುದನ್ನು ಅವರು ಈಗಾಗಲೇ ರಾಜ್ಯಕ್ಕೆ ತೋರಿಸಿದ್ದಾರೆ. ಪ್ರಸ್ತು ಅವರ ಅಧಿಕಾರ ಹಾಗೂ ಲಾಭದ ಕಡೆಗಷ್ಟೇ ಆಲೋಚನೆ ನಡೆಸುತ್ತಿದ್ದಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT