ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾವದ್ ಹಾಗೂ ಅವರ ಮಗ ಅಖಿಲೇಶ್ ಯಾದವ್ 
ದೇಶ

ನಾಟಕ ಕಂಪನಿಯಾಗಿ ಪರಿವರ್ತನೆಗೊಳ್ಳುತ್ತಿದೆ ಸಮಾಜವಾದಿ ಪಕ್ಷ: ಬಿಎಸ್'ಪಿ

ಉತ್ತರಪ್ರದೇಶದ ಆಡಳಿತಾರೂಢ ಸರ್ಕಾರ ಜನರನ್ನು ಮೂರ್ಖರನ್ನಾಗಿಸುವ ಪ್ರಯತ್ನಗಳನ್ನು ಮಾಡುತ್ತಿದ್ದು, ದಿನಕಳೆಯುತ್ತಿದ್ದಂತೆ ಸಮಾಜವಾದಿ ಪಕ್ಷ ನಾಟಕದ ಕಂಪನಿಯಂತೆ ಪರಿವರ್ತನೆಗೊಳ್ಳುತ್ತಿದೆ ಎಂದು ಬಹುಜನ ಸಮಾಜ ಪಕ್ಷ...

ನವದೆಹಲಿ: ಉತ್ತರಪ್ರದೇಶದ ಆಡಳಿತಾರೂಢ ಸರ್ಕಾರ ಜನರನ್ನು ಮೂರ್ಖರನ್ನಾಗಿಸುವ ಪ್ರಯತ್ನಗಳನ್ನು ಮಾಡುತ್ತಿದ್ದು, ದಿನಕಳೆಯುತ್ತಿದ್ದಂತೆ ಸಮಾಜವಾದಿ ಪಕ್ಷ ನಾಟಕದ ಕಂಪನಿಯಂತೆ ಪರಿವರ್ತನೆಗೊಳ್ಳುತ್ತಿದೆ ಎಂದು ಬಹುಜನ ಸಮಾಜ ಪಕ್ಷ ಶನಿವಾರ ವ್ಯಂಗ್ಯವಾಡಿದೆ.

ಈ ಕುರಿತಂತೆ ಮಾತನಾಡಿರುವ ಬಿಎಸ್ ಪಿ ಪಕ್ಷದ ನಾಯಕ ಸುಧೀಂದ್ರ ಭಡೋರಿಯಾ ಅವರು, ರಾಜ್ಯದಲ್ಲಿ ಆಡಳಿತ ಹಾಗೂ ಅಭಿವೃದ್ಧಿಯನ್ನು ಮಾಡುತ್ತಿಲ್ಲ. ಜನರನ್ನು ಮೂರ್ಖರನ್ನಾಗಿಸುವ ಪ್ರಯತ್ನಗಳನ್ನು ಮಾಡುತ್ತಿದೆ. ಸಮಾಜವಾದಿ ಪಕ್ಷ ನಾಟಕದ ಕಂಪನಿಯಂತೆ ಪರಿವರ್ತನೆಗೊಳ್ಳುತ್ತಿದೆ. ಚುನಾವಣಾ ಆಯೋಗ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಿ ಆದರೆ, ಉತ್ತರಪ್ರದೇಶ ಜನತೆ ಮಾತ್ರ ಸಮಾಜವಾದಿ ಪಕ್ಷವನ್ನು ತಿರಸ್ಕರಿಸಿದ್ದಾರೆಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾವದ್ ಹಾಗೂ ಅವರ ಮಗ ಅಖಿಲೇಶ್ ಯಾದವ್ ಅವರು ಕೇವಲ ಅವರ ಬಗ್ಗೆಯಷ್ಟೇ ಆಲೋಚನೆ ಮಾಡುತ್ತಿದ್ದಾರೆ. ರಾಜ್ಯ ಅಭಿವೃದ್ಧಿ ಕಡೆಗೆ ಅವರು ಗಮನ ನೀಡುತ್ತಿಲ್ಲ. ಉತ್ತರಪ್ರದೇಶ ರಾಜ್ಯ ಅಭಿವೃದ್ಧಿಯೊಂದಿಗೆ ತಾವು ಏನನ್ನೂ ಮಾಡುವುದಿಲ್ಲ ಎಂಬುದನ್ನು ಅವರು ಈಗಾಗಲೇ ರಾಜ್ಯಕ್ಕೆ ತೋರಿಸಿದ್ದಾರೆ. ಪ್ರಸ್ತು ಅವರ ಅಧಿಕಾರ ಹಾಗೂ ಲಾಭದ ಕಡೆಗಷ್ಟೇ ಆಲೋಚನೆ ನಡೆಸುತ್ತಿದ್ದಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್