ಲಾಲೂ ಪ್ರಸಾದ್ ಯಾದವ್ 
ದೇಶ

ಕ್ಯಾಲೆಂಡರ್ ನಲ್ಲಿ ಗಾಂಧಿ ಬದಲು ಮೋದಿ ಚಿತ್ರ ಹಾಕಿರುವುದು ದೇಶದ್ರೋಹ: ಲಾಲೂ ಪ್ರಸಾದ್

ಖಾದಿ ಮತ್ತು ಗ್ರಾಮೋದ್ಯೋಗ ಕ್ಯಾಲೆಂಡರ್ ಹಾಗೂ ಡೈರಿಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಚಿತ್ರ ತೆಗೆದು ಹಾಕಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ...

ಪಾಟ್ನಾ: ಖಾದಿ ಮತ್ತು ಗ್ರಾಮೋದ್ಯೋಗ ಕ್ಯಾಲೆಂಡರ್ ಹಾಗೂ ಡೈರಿಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಚಿತ್ರ ತೆಗೆದು ಹಾಕಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಹಾಕಿರುವುದು ದೇಶದ್ರೋಹದ ಕೆಲಸ ಎಂದು ಆರ್ ಜೆಡಿ ಮುಖ್ಯಸ್ಥಲಾಲೂ ಪ್ರಸಾದ್ ಆರೋಪಿಸಿದ್ದಾರೆ.

ಮಕರ ಸಂಕ್ರಾಂತಿ ಪ್ರಯಕ್ತ ತಮ್ಮ ಮನೆಯಲ್ಲಿ ಹಮ್ಮಿಕೊಂಡಿದ್ದ ದಹಿ -ಚೂರ ಕಾರ್ಯಕ್ರಮದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧಿ ಬದಲು ಮೋದಿ ಚಿತ್ರ ಹಾಕಿರುವುದು ದುರಾದೃಷ್ಟ, ಮೋದಿ ಗಾಂಧಿ ಅವರ ವ್ಯಕ್ತಿತ್ವದ ಒಂದು ಸಣ್ಣ ಅಣುವಿಗೂ ಸಮರಲ್ಲ, ಗಾಂಧಿ ಅವರ ಚಿತ್ರ ತೆಗೆದಿರುವು ರಾಷ್ಟ್ರಪಿತನಿಗೆ ಮಾಡಿದ ದೊಡ್ಡ ಅವಮಾನ, ನಾನು ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಹೇಳಿದ್ದಾರೆ.

ಗಾಂಧಿ ಬದಲು ಮೋದಿ ಚಿತ್ರ ಹಾಕಿರುವುದು ದೇಶದ್ರೋಹದ ಕೆಲಸ. ಹೀಗಾಗಿ ದೇಶದ ಜನತೆ ದೇಶದ್ರೋಹದ ಕೇಸ್ ದಾಖಲಿಸಬೇಕು, ರಾಷ್ಟ್ರಪಿತನಿಗೆ ಆಗಿರುವ ಅವಮಾನದ ವಿರುದ್ಧ ಜನರು ಪ್ರತಿಭಟನೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT