ಲಾಲೂ ಪ್ರಸಾದ್ ಯಾದವ್ 
ದೇಶ

ಕ್ಯಾಲೆಂಡರ್ ನಲ್ಲಿ ಗಾಂಧಿ ಬದಲು ಮೋದಿ ಚಿತ್ರ ಹಾಕಿರುವುದು ದೇಶದ್ರೋಹ: ಲಾಲೂ ಪ್ರಸಾದ್

ಖಾದಿ ಮತ್ತು ಗ್ರಾಮೋದ್ಯೋಗ ಕ್ಯಾಲೆಂಡರ್ ಹಾಗೂ ಡೈರಿಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಚಿತ್ರ ತೆಗೆದು ಹಾಕಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ...

ಪಾಟ್ನಾ: ಖಾದಿ ಮತ್ತು ಗ್ರಾಮೋದ್ಯೋಗ ಕ್ಯಾಲೆಂಡರ್ ಹಾಗೂ ಡೈರಿಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಚಿತ್ರ ತೆಗೆದು ಹಾಕಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಹಾಕಿರುವುದು ದೇಶದ್ರೋಹದ ಕೆಲಸ ಎಂದು ಆರ್ ಜೆಡಿ ಮುಖ್ಯಸ್ಥಲಾಲೂ ಪ್ರಸಾದ್ ಆರೋಪಿಸಿದ್ದಾರೆ.

ಮಕರ ಸಂಕ್ರಾಂತಿ ಪ್ರಯಕ್ತ ತಮ್ಮ ಮನೆಯಲ್ಲಿ ಹಮ್ಮಿಕೊಂಡಿದ್ದ ದಹಿ -ಚೂರ ಕಾರ್ಯಕ್ರಮದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧಿ ಬದಲು ಮೋದಿ ಚಿತ್ರ ಹಾಕಿರುವುದು ದುರಾದೃಷ್ಟ, ಮೋದಿ ಗಾಂಧಿ ಅವರ ವ್ಯಕ್ತಿತ್ವದ ಒಂದು ಸಣ್ಣ ಅಣುವಿಗೂ ಸಮರಲ್ಲ, ಗಾಂಧಿ ಅವರ ಚಿತ್ರ ತೆಗೆದಿರುವು ರಾಷ್ಟ್ರಪಿತನಿಗೆ ಮಾಡಿದ ದೊಡ್ಡ ಅವಮಾನ, ನಾನು ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಹೇಳಿದ್ದಾರೆ.

ಗಾಂಧಿ ಬದಲು ಮೋದಿ ಚಿತ್ರ ಹಾಕಿರುವುದು ದೇಶದ್ರೋಹದ ಕೆಲಸ. ಹೀಗಾಗಿ ದೇಶದ ಜನತೆ ದೇಶದ್ರೋಹದ ಕೇಸ್ ದಾಖಲಿಸಬೇಕು, ರಾಷ್ಟ್ರಪಿತನಿಗೆ ಆಗಿರುವ ಅವಮಾನದ ವಿರುದ್ಧ ಜನರು ಪ್ರತಿಭಟನೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!