ಸಂಗ್ರಹ ಚಿತ್ರ 
ದೇಶ

ಗಾಳಿಪಟ ಉತ್ಸವದ ವೇಳೆ ದೋಣಿ ಮಗುಚಿ ಮೃತಪಟ್ಟವರ ಸಂಖ್ಯೆ 24ಕ್ಕೇರಿಕೆ, ಹಲವರು ನಾಪತ್ತೆ

ಬಿಹಾರದ ಪಾಟ್ನಾದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಗಾಳಿಪಟ ಉತ್ಸವದ ವೇಳೆ ದೋಣಿ ಮಗುಚಿ ಬಿದ್ದು...

ಪಾಟ್ನಾ : ಬಿಹಾರದ ಪಾಟ್ನಾದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಗಾಳಿಪಟ ಉತ್ಸವದ ವೇಳೆ ದೋಣಿ ಮಗುಚಿ ಬಿದ್ದು ಮೃತಪಟ್ಟವರ ಸಂಖ್ಯೆ 24ಕ್ಕೇರಿದ್ದು, ಅನೇಕ ಮಂದಿ ನಾಪತ್ತೆಯಾಗಿದ್ದಾರೆ.


ಪಾಟ್ನಾದ ಗಂಗಾನದಿಯಲ್ಲಿ ಈ ದುರಂತ ಸಂಭವಿಸಿದೆ.ದೋಣಿಯಲ್ಲಿ 80 ಜನ ಇದ್ದರೆಂದು ಹೇಳಲಾಗಿದೆ. ಅದರಲ್ಲೆ 24 ಜನ ಸಾವನ್ನಪ್ಪಿದ್ದಾರೆ. ನಾಪತ್ತೆಯಾದವರ ಸಂಖ್ಯೆ ಇನ್ನೂ ನಿಖರವಾಗಿ ಸಿಕ್ಕಿಲ್ಲ. ರಕ್ಷಣಾ ಕಾರ್ಯ ಪ್ರಗತಿಯಲ್ಲಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ.

ರಾಜ್ಯ ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ಗಾಳಿ ಪಟ ಸ್ಪರ್ದೆಯಲ್ಲಿ ಜನಜಂಗುಳಿ ಹೆಚ್ಚಿದ ಪರಿಣಾಮ ಈ ದುಂರತ ಸಂಭವಿಸಿದೆ. ಉತ್ಸವದಲ್ಲಿ ಭಾಗವಹಿಸಲು ಹೆಚ್ಚಿನ ಜನ ಆಗಮಿಸಿದ್ದರು. ಆದರೆ ಅವರಿಗೆ ಅಗತ್ಯ ವಾದಷ್ಟು ಸಂಖ್ಯೆಯಲ್ಲಿ ದೋಣಿಗಳು ಇರಲಿಲ್ಲ, ದೋಣಿಯಲ್ಲಿ ಮಿತಿಗಿಂತ ಹೆಚ್ಚಿನ ಜನರನ್ನು ತುಂಬಿದ್ದು ದುರಂತಕ್ಕೆ ಕಾರಣ ಎಂದು ಕೆಲ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ತಡರಾತ್ರಿಯವರೆಗೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿತ್ತು. ರಕ್ಷಣಾ ತಂಡ 8 ಜನರನ್ನು ಪಾರು ಮಾಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾಣೆಯಾದವರಿಗಾಗಿ ಹುಡುಕಾಟ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತಾಪ ಸೂಚಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್  ತನಿಖೆಗೆ ಆದೇಶಿಸಿದ್ದಾರೆ. ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ಧನ ನೀಡುವಂತೆ ನಿತೀಶ್ ಕುಮಾರ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಉತ್ತರಪ್ರದೇಶದ ನಿಯಮದ ಪ್ರಕಾರ ದುರಂತದಲ್ಲಿ ಮೃತಪಟ್ಟರೆ ಅಂಥವರ ಕುಟುಂಬಕ್ಕೆ ನಾಲ್ಕು ಲಕ್ಷ ರೂ. ಪರಿಹಾರ ದೊರೆಯಲಿದೆ.

ದುರಂತ ನಡೆದು 45 ನಿಮಿಷಗಳ ನಂತರ ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿತು. ಇದರಿಂದಾಗಿ ಸಾವಿನ ಪ್ರಮಾಣ ಹೆಚ್ಚಾಗಲು ಕಾರಣವಾಗಿದೆ, ದೋಣಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ದುರಂತ ಸಂಭವಿಸಿದೆ ಎಂದು ಕೆಲ ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT