ಅಸಾದುದ್ದೀನ್ ಒವೈಸಿ 
ದೇಶ

ಮಹಾತ್ಮ ಗಾಂಧಿಗಿಂತ ಅಂಬೇಡ್ಕರ್ ಮಹಾನ್ ನಾಯಕ: ಒವೈಸಿ

ಜಾತ್ಯಾತೀತ ಹಾಗೂ ವರ್ಗರಹಿತ ಸಂವಿಧಾನ ನೀಡಿದ ದಲಿತರ ಐಕಾನ್ ಡಾ.ಬಿ. ಆರ್ ಅಂಬೇಡ್ಕರ್ ಮಹಾತ್ಮ ಗಾಂಧಿಗಿಂತ ದೊಡ್ಡ ನಾಯಕ ಎಂದು ..

ಸಂಬಾಲ್: ಜಾತ್ಯಾತೀತ ಹಾಗೂ ವರ್ಗರಹಿತ ಸಂವಿಧಾನ ನೀಡಿದ ದಲಿತರ ಐಕಾನ್ ಡಾ.ಬಿ. ಆರ್ ಅಂಬೇಡ್ಕರ್ ಮಹಾತ್ಮ ಗಾಂಧಿಗಿಂತ ದೊಡ್ಡ ನಾಯಕ ಎಂದು ಎಐಎಮ್ಐಎಮ್ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ನಡೆದ ಆಲ್ ಇಂಡಿಯಾ ಇತ್ತೇಹಾದ್ ಉಲ್ ಮುಸ್ಲಿಮೀನ್ ರ್ಯಾಲಿಯಲ್ಲಿ ಮಾತನಾಡಿದ ಒವೈಸಿ ವರ್ಗ ರಹಿತ ಹಾಗೂ ಜಾತ್ಯಾತೀತ ಸಂವಿಧಾನ ನೀಡಿದ್ದರೂ ದೇಶದಲ್ಲಿ ಅನ್ಯಾಯ ತಾಂಡವವಾಡುತ್ತಿದೆ ಎಂದು ಹೇಳಿದ್ದಾರೆ. ಪರಿಸ್ಥಿತಿ ಹದಗೆಡಿಸಲು ಆರ್ ಎಸ್ ಎಸ್ ಜನ ಸಿಗುವ ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನರೇಂದ್ರ ಮೋದಿ ಮಹಾತ್ಮ ಗಾಂಧಿ ಅವರ ಅನುಯಾಯಿಯಾಗಬಹುದು, ಕ್ಯಾಲೆಂಡರ್ ನಲ್ಲಿ ಚರಕ ಹಿಡಿದುಕೊಂಡ ತಕ್ಷಣ ರಾಷ್ಟ್ರಪಿತ ಸ್ಥಾನವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಒವೈಸಿ ಟೀಕಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಆಯ್ಕೆಯಾಗುವ ಮುನ್ನ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡತ್ತೇವೆ ಎಂದು ಹೇಳುತ್ತಿದ್ದ ಮೋದಿ, ಸರ್ಜಿಕಲ್ ಸ್ಟ್ರೈಕ್ ವೇಳೆ 28 ಮಂದಿ ಯೋಧರ ಸಾವಿಗೆ ಇದುವರೆಗೊ ಪಾಕಿಸ್ತಾನಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಅವರು ದೂರಿದ್ದಾರೆ. ಬಡ ಜನರಿಗೆ ತೊಂದರೆ ನೀಡುವ ಸಲುವಾಗಿಯೇ ನವೆಂಬರ್ 8 ರಂದು ನೋಟು ನಿಷೇಧ ಜಾರಿಗೆ ತರಲಾಯಿತು ಎಂದು ಆಪಾದಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT