ಮಾರನ್ ಸಹೋದರರು (ಸಂಗ್ರಹ ಚಿತ್ರ) 
ದೇಶ

ಏರ್ಸೆಲ್-ಮ್ಯಾಕ್ಸಿಸ್ ಒಪ್ಪಂದ: ಮಾರನ್ ಸಹೋದರರ ವಿರುದ್ಧ ವಿಚಾರಣೆ ಜ.24ಕ್ಕೆ ಮುಂದೂಡಿಕೆ

ಅಕ್ರಮ 2ಜಿ ತರಂಗಾಂತರ ಹಂಚಿಕೆ ಸಂಬಂಧ ಏರ್ಸೆಲ್-ಮ್ಯಾಕ್ಸಿಸ್ ಒಪ್ಪಂದ ಪ್ರಕರಣದ ಮಾರನ್ ಸಹೋದರರ ವಿರುದ್ಧದ ವಿಚಾರಣೆಯನ್ನು ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಜನವರಿ 24ಕ್ಕೆ ಮುಂದೂಡಿದೆ.

ನವದೆಹಲಿ: ಅಕ್ರಮ 2ಜಿ ತರಂಗಾಂತರ ಹಂಚಿಕೆ ಸಂಬಂಧ ಏರ್ಸೆಲ್-ಮ್ಯಾಕ್ಸಿಸ್ ಒಪ್ಪಂದ ಪ್ರಕರಣದ ಮಾರನ್ ಸಹೋದರರ ವಿರುದ್ಧದ ವಿಚಾರಣೆಯನ್ನು ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಜನವರಿ 24ಕ್ಕೆ ಮುಂದೂಡಿದೆ.

ಲಾಭಾಂಶ ಪಡೆದು ಏರ್ಸೆಲ್-ಮ್ಯಾಕ್ಸಿಸ್ ಸಂಸ್ಥೆಗಳಿಗೆ ಅಕ್ರಮವಾಗಿ ತರಂಗಾಂತರ ಹಂಚಿಕೆ ಮಾಡಿದ ಆರೋಪ ಸಂಬಂಧ ಮಾಜಿ ಟೆಲಿಕಾಮ್ ಮಿನಿಸ್ಟರ್ ದಯಾನಿಧಿ ಮಾರನ್ ಹಾಗೂ ಅವರ ಸಹೋದರ ಕಳಾನಿಧಿ ಮಾರನ್  ಸೇರಿದಂತೆ ಇತರೆ ಇಬ್ಬರು ವಿಚಾರಣೆ ಎದುರಿಸುತ್ತಿದ್ದರು. ಈ ವಿಚಾರಣೆಯನ್ನು ನ್ಯಾಯಾಲಯ ಜನವರಿ 24ಕ್ಕೆ ಮುಂದೂಡಿದೆ.

ಇನ್ನು ಈ ಹಿಂದೆ ಇದೇ ಪ್ರಕರಣ ಸಂಬಂಧ ಅಕ್ರಮವಾಗಿ ತಮ್ಮ ನಿವಾಸದಲ್ಲಿ ದೂರವಾಣಿ ವಿನಿಮಯ ಕೇಂದ್ರ ಸ್ಥಾಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಯಾನಿಧಿ ಮಾರನ್ ಹಾಗೂ ಅವರ ಸಹೋದರ ಕಲಾನಿಧಿ ಮಾರನ್ ಮತ್ತು  ಇತರೆ ಮೂವರು ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಮಾರನ್ ಸಹೋದರರಲ್ಲದೇ ಇಬ್ಬರು ಬಿಎಸ್ಎನ್ಎಲ್ ನ ಚೀಫ್ ಜನರಲ್ ಮ್ಯಾನೇಜರ್ ಗಳ ವಿರುದ್ಧವೂ ಸಿಬಿಐ ಚಾರ್ಜ್ ಶೀಟ್ ದಾಖಲಿಸಿತ್ತು. ಅಕ್ರಮ ದೂರವಾಣಿ  ವಿನಿಮಯ ಕೇಂದ್ರ ಸ್ಥಾಪನೆಯಿಂದಾಗಿ ಸರ್ಕಾರಕ್ಕೆ 1.78 ಕೋಟಿ ರುಪಾಯಿ ನಷ್ಟವಾಗಿದೆ ಎಂದು ಸಿಬಿಐ ಚಾರ್ಜ್ ಶೀಟ್ ನಲ್ಲಿ ಆರೋಪಿಸಿತ್ತು.

ದೂರಸಂಪರ್ಕ ಸಚಿವರಾಗಿದ್ದ ಸಂದರ್ಭದಲ್ಲಿ ತಮ್ಮ ನಿವಾಸಕ್ಕೆ ಅಕ್ರಮವಾಗಿ 300 ಅತ್ಯಧಿಕ ವೇಗದ ದೂರವಾಣಿ ಸಂಪರ್ಕಗಳನ್ನು ಪಡೆದು ಅದನ್ನು ಸನ್‌ ಟಿವಿ ನೆಟ್‌ ವರ್ಕ್‌ನ ವಾಹಿನಿಗಳನ್ನು ಪ್ರಸಾರ ಮಾಡಲು ಬಳಸಿಕೊಂಡಿದ್ದ  ಆರೋಪವನ್ನು ಮಾರನ್‌ ಸಹೋದರರು ಎದುರಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT