ಅಖಿಲೇಶ್ ಯಾದವ್ - ರಾಹುಲ್ ಗಾಂಧಿ 
ದೇಶ

ವಾರಣಾಸಿ ಪೋಸ್ಟರ್​ಗಳಲ್ಲಿ ಕೃಷ್ಣಾರ್ಜುನರಾಗಿ ರಾಹುಲ್, ಅಖಿಲೇಶ್ ಪ್ರತ್ಯಕ್ಷ!

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಾಗಿ ಆಡಳಿತರೂಢ ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಚುನಾವಣಾ ಪೂರ್ವ ಮೈತ್ರಿ ಬಗ್ಗೆ ಒಲವು...

ವಾರಣಾಸಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಾಗಿ ಆಡಳಿತರೂಢ ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಚುನಾವಣಾ ಪೂರ್ವ ಮೈತ್ರಿ ಬಗ್ಗೆ ಒಲವು ತೋರಿರುವ ಬೆನ್ನಲ್ಲೇ ವಾರಣಾಸಿಯ ಹಲವು ಕಡೆ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಕೃಷ್ಣಾರ್ಜುನರಾಗಿ ರಥದಲ್ಲಿ ಕಾಣಿಸಿಕೊಂಡಿರುವ ಪೋಸ್ಟರ್​ಗಳ ರಾರಾಜಿಸುತ್ತಿದೆ.
ಪೋಸ್ಟರ್​ಗಳಲ್ಲಿ ಕೃಷ್ಣನಾಗಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಅರ್ಜುನನಾಗಿ ಎಸ್​ಪಿ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಅವರನ್ನು ಬಿಂಬಿಸಲಾಗಿದ್ದು, ಕಾಂಗ್ರೆಸ್ ಮತ್ತು ಎಸ್​ಪಿ ನಡುವಿನ ಮೈತ್ರಿ ಬಹುತೇಕ ಖಚಿತ ಎನ್ನಲಾಗಿದೆ. ಪೋಸ್ಟರ್​ನಲ್ಲಿ ಎಸ್​ಪಿ ಚಿಹ್ನೆ ಸೈಕಲ್ ಬಳಸಲಾಗಿದೆ. ವಿಕಾಸ ಮತ್ತು ವಿಜಯದ ಹಾದಿಯಲ್ಲಿ ಇಬ್ಬರು ಮಹಾರಥಿಗಳು ಮುನ್ನುಗ್ಗುತ್ತಿದ್ದಾರೆ ಎಂಬ ಘೊಷವಾಕ್ಯವನ್ನು ಬಳಸಲಾಗಿದೆ.
ಈಗಾಗಲೇ ಕಾಂಗ್ರೆಸ್ ಮುಖ್ಯಮಂತ್ರಿಯಾಗಬೇಕಿದ್ದ ಮಾಜಿ ಸಿಎಂ ಶೀಲಾ ದೀಕ್ಷಿತ್ ಸಂಪೂರ್ಣವಾಗಿ ಅಖಿಲೇಶ್​ಗೆ ಸಹಮತ ವ್ಯಕ್ತಪಡಿಸಿದ್ದು, ಚುನಾವಣೆಯಲ್ಲಿ ಸಿಎಂ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.
ತಂದೆ ಮುಲಾಯಂ ಸಿಂಗ್ ಯಾದವ್ ಮತ್ತು ಚಿಕ್ಕಪ್ಪ ಶಿವಪಾಲ್ ಯಾದವ್ ವಿರುದ್ಧ ಸೈಕಲ್ ಚಿಹ್ನೆಗಾಗಿ ಪೈಪೋಟಿ ನಡೆಸಿ ಗೆದ್ದಿದ್ದ ಅಖಿಲೇಶ್ ಕಾಂಗ್ರೆಸ್ ಜತೆಗೆ ಮೈತ್ರಿ ಸಾಧಿಸುವತ್ತ ಹೆಜ್ಜೆ ಇರಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT