ಸಾಂದರ್ಭಿಕ ಚಿತ್ರ 
ದೇಶ

ಶಿವಲಿಂಗಕ್ಕೆ ವಿಸ್ಕಿ ಕುಡಿಸುವ ದೃಶ್ಯ, ತೆಲುಗು ಸಿನಿಮಾ ನಿರ್ದೇಶಕನ ಬಂಧನ

ಸದ್ಯದಲ್ಲೇ ಬಿಡುಗಡೆಯಾಗಲಿರುವ ತೆಲುಗು ಚಿತ್ರವೊಂದರಲ್ಲಿ ಶಿವ ಲಿಂಗಕ್ಕೆ ವಿಸ್ಕಿ ಕುಡಿಸುವ ಹಾಗೂ ದೇವಸ್ಥಾನದಲ್ಲಿ ಅಗರಬತ್ತಿ ಬದಲು...

ಹೈದರಾಬಾದ್: ಸದ್ಯದಲ್ಲೇ ಬಿಡುಗಡೆಯಾಗಲಿರುವ ತೆಲುಗು ಚಿತ್ರವೊಂದರಲ್ಲಿ ಶಿವ ಲಿಂಗಕ್ಕೆ ವಿಸ್ಕಿ ಕುಡಿಸುವ ಹಾಗೂ ದೇವಸ್ಥಾನದಲ್ಲಿ ಅಗರಬತ್ತಿ ಬದಲು ಸಿಗರೇಟ್ ಹೊತ್ತಿಸುವ ಮೂಲಕ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಚಿತ್ರದ ನಿರ್ದೇಶಕರನ್ನು ತೆಲಂಗಾಣ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಹೊಸ ಕಲಾವಿದರು ಅಭಿನಯಿಸಿರುವ ದೇವುಡ ಚಿತ್ರದಲ್ಲಿ ಈ ದೃಶ್ಯಗಳಿದ್ದು, ಚಿತ್ರದ ನಿರ್ದೇಶಕ ದಾಸರಿ ಸಾಯಿರಾಮ್ ಹಾಗೂ ನಿರ್ಮಾಪಕ ಗಜ್ಜೆಲ ಹರಿ ಕುಮಾರ್ ರೆಡ್ಡಿ ಅವರನ್ನು ಇಂದು ಬಂಧಿಸಲಾಗಿದೆ.
ಶಿವಲಿಂಗಕ್ಕೆ ವಿಸ್ಕಿ ಕುಡಿಸುವ ದೃಶ್ಯ ತೋರಿಸುವ ಮೂಲಕ ಧಾರ್ಮಿಕ ಭಾವನೆಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಬಜರಂಗದಳ ಕಾರ್ಯಕರ್ತರು ನೀಡಿದ್ದ ದೂರಿನ ಆಧಾರದ ಮೇಲೆ ತೆಲಂಗಾಣ ಪೊಲೀಸರು ಆಂಧ್ರಪ್ರದೇಶದ ತೆನಾಲಿ ಮೂಲದ ನಿರ್ದೇಶಕನನ್ನು ಹಾಗೂ ಕಡಪಾ ಮೂಲದ ನಿರ್ಮಾಪಕನನ್ನು ವಶಕ್ಕೆ ಪಡೆದಿದ್ದಾರೆ.
ಈ ಇಬ್ಬರು ಆರೋಪಿಗಳ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಕೇಸ್ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT