ಸಾಂದರ್ಭಿಕ ಚಿತ್ರ 
ದೇಶ

ಶಿವಲಿಂಗಕ್ಕೆ ವಿಸ್ಕಿ ಕುಡಿಸುವ ದೃಶ್ಯ, ತೆಲುಗು ಸಿನಿಮಾ ನಿರ್ದೇಶಕನ ಬಂಧನ

ಸದ್ಯದಲ್ಲೇ ಬಿಡುಗಡೆಯಾಗಲಿರುವ ತೆಲುಗು ಚಿತ್ರವೊಂದರಲ್ಲಿ ಶಿವ ಲಿಂಗಕ್ಕೆ ವಿಸ್ಕಿ ಕುಡಿಸುವ ಹಾಗೂ ದೇವಸ್ಥಾನದಲ್ಲಿ ಅಗರಬತ್ತಿ ಬದಲು...

ಹೈದರಾಬಾದ್: ಸದ್ಯದಲ್ಲೇ ಬಿಡುಗಡೆಯಾಗಲಿರುವ ತೆಲುಗು ಚಿತ್ರವೊಂದರಲ್ಲಿ ಶಿವ ಲಿಂಗಕ್ಕೆ ವಿಸ್ಕಿ ಕುಡಿಸುವ ಹಾಗೂ ದೇವಸ್ಥಾನದಲ್ಲಿ ಅಗರಬತ್ತಿ ಬದಲು ಸಿಗರೇಟ್ ಹೊತ್ತಿಸುವ ಮೂಲಕ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಚಿತ್ರದ ನಿರ್ದೇಶಕರನ್ನು ತೆಲಂಗಾಣ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಹೊಸ ಕಲಾವಿದರು ಅಭಿನಯಿಸಿರುವ ದೇವುಡ ಚಿತ್ರದಲ್ಲಿ ಈ ದೃಶ್ಯಗಳಿದ್ದು, ಚಿತ್ರದ ನಿರ್ದೇಶಕ ದಾಸರಿ ಸಾಯಿರಾಮ್ ಹಾಗೂ ನಿರ್ಮಾಪಕ ಗಜ್ಜೆಲ ಹರಿ ಕುಮಾರ್ ರೆಡ್ಡಿ ಅವರನ್ನು ಇಂದು ಬಂಧಿಸಲಾಗಿದೆ.
ಶಿವಲಿಂಗಕ್ಕೆ ವಿಸ್ಕಿ ಕುಡಿಸುವ ದೃಶ್ಯ ತೋರಿಸುವ ಮೂಲಕ ಧಾರ್ಮಿಕ ಭಾವನೆಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಬಜರಂಗದಳ ಕಾರ್ಯಕರ್ತರು ನೀಡಿದ್ದ ದೂರಿನ ಆಧಾರದ ಮೇಲೆ ತೆಲಂಗಾಣ ಪೊಲೀಸರು ಆಂಧ್ರಪ್ರದೇಶದ ತೆನಾಲಿ ಮೂಲದ ನಿರ್ದೇಶಕನನ್ನು ಹಾಗೂ ಕಡಪಾ ಮೂಲದ ನಿರ್ಮಾಪಕನನ್ನು ವಶಕ್ಕೆ ಪಡೆದಿದ್ದಾರೆ.
ಈ ಇಬ್ಬರು ಆರೋಪಿಗಳ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಕೇಸ್ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT