ಶಾಲಾ ಬಸ್ ದುರ್ಘಟನೆ 
ದೇಶ

ಶಾಲಾ ಬಸ್ ದುರ್ಘಟನೆ: ಇಟಾ ಶಿಕ್ಷಣ ಇಲಾಖೆಯ 2 ಅಧಿಕಾರಿಗಳು ಅಮಾನತು

ಉತ್ತರಪ್ರದೇಶ ಇಟಾ ಜಿಲ್ಲೆಯಲ್ಲಿ ನಿನ್ನೆಯಷ್ಟೇ ನಡೆದ ಶಾಲಾ ಬಸ್ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಟಾ ಶಿಕ್ಷಣ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತು...

ಇಟಾ (ಉತ್ತರಪ್ರದೇಶ): ಉತ್ತರಪ್ರದೇಶ ಇಟಾ ಜಿಲ್ಲೆಯಲ್ಲಿ ನಿನ್ನೆಯಷ್ಟೇ ನಡೆದ ಶಾಲಾ ಬಸ್ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಟಾ ಶಿಕ್ಷಣ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿರುವುದಾಗಿ ಶುಕ್ರವಾರ ತಿಳಿದುಬಂದಿದೆ.

ಜಿಲ್ಲಾ ಆಡಳಿತ ಆದೇಶ ನೀಡಿದ್ದರು ಶಾಲೆಯನ್ನು ಅಕ್ರಮವಾಗಿ ತೆರೆಯಲಾಗಿತ್ತು. ನಿನ್ನೆ ನಡೆದ ದುರ್ಘಟನೆ ಬಳಿಕ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಶಾಲೆಯ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ. ಅಲ್ಲದೆ, ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿರುವುದಾಗಿ ಪೊಲೀಸ್ ಅಧಿಕಾರಿ ದಲಿಜೀತ್ ಸಿಂಗ್ ಚೌಧರಿಯವರು ಹೇಳಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಶಾಲಾ ಆಡಳಿತ ಹಾಗೂ ಬಸ್ ಚಾಲಕನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದರು. ಅಲ್ಲದೆ, ಅಧಿಕಾರಿಗಳು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿದ್ದರು.

ನಿನ್ನೆಯಷ್ಟೇ ಉತ್ತರಪ್ರದೇಶದ ಇಟಾ ಜಿಲ್ಲೆಯಲ್ಲಿ ಶಾಲಾ ಬಸ್ ಹಾಗೂ ಲಾರಿ ಎರಡು ಮುಖಾಮುಖಿ ಡಿಕ್ಕಿಹೊಡೆದಿದ್ದವು. ಘಟನೆಯಲ್ಲಿ ಬಸ್ ನಲ್ಲಿ 15 ಮಕ್ಕಳು ಸ್ಥಳದಲ್ಲಿಯೇ ಮೃತಪಟ್ಟಿದ್ದರು. 40ಕ್ಕೂ ಹೆಚ್ಚು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು.

ದುರ್ಘಟನೆ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದರು. ಆಕಸ್ಮಿಕವಾಗಿ ಸಂಭವಿಸಿರುವ ಈ ಘಟನೆ ನೋವುಂಟು ಮಾಡಿದೆ. ಗಾಯಗೊಂಡಿರುವ ಮಕ್ಕಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಹೇಳಿದ್ದರು.

ಇದಲ್ಲದೆ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರೂ ಕೂಡ ಘಟನೆ ಕುರಿತಂತೆ ಸಂತಾಪವನ್ನು ಸೂಚಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT