ಬಿಎಸ್ಪಿ ನಾಯಕಿ ಮಾಯಾವತಿ 
ದೇಶ

ಮುಸ್ಲಿಂ ಮತದಾರರು ಬುದ್ದಿವಂತಿಕೆಯಿಂದ ಮತ ಹಾಕುವಂತೆ ಮಾಯಾವತಿ ಮನವಿ

ಬಿಜೆಪಿಯನ್ನು ಸೋಲಿಸಲು ಮುಸಲ್ಮಾನ ಮತದಾರರು ಸಮಾಜವಾದಿ ಪಕ್ಷಕ್ಕೆ ಬದಲಾಗಿ...

ಲಕ್ನೋ: ಬಿಜೆಪಿಯನ್ನು  ಸೋಲಿಸಲು ಮುಸಲ್ಮಾನ ಮತದಾರರು ಸಮಾಜವಾದಿ ಪಕ್ಷಕ್ಕೆ ಬದಲಾಗಿ ಬಹುಜನ ಸಮಾಜವಾದಿ ಪಕ್ಷಕ್ಕೆ ಮತ ನೀಡಬೇಕೆಂದು ನಾಯಕಿ ಮಾಯಾವತಿ ಮನವಿ ಮಾಡಿದ್ದಾರೆ.
ಲಕ್ನೋದಲ್ಲಿಂದು ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ಬಿಜೆಪಿಯನ್ನು ಸೋಲಿಸಲು ಎಸ್ಪಿಗೆ ಬದಲಾಗಿ ಬಿಎಸ್ಪಿಗೆ ಮತ ಚಲಾಯಿಸಬೇಕು. ಮುಸ್ಲಿಂ ಮತದಾರರು ಬುದ್ದಿವಂತಿಕೆಯಿಂದ ಮತ ಹಾಕುವಂತೆ ಮನವಿ ಮಾಡಿದರು.
ಬಿಜೆಪಿ ವಿರುದ್ಧ ಹರಿಹಾಯ್ದ ಅವರು, 2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀಡಿದ್ಧ ಭರವಸೆಯಲ್ಲಿ 4ನೇ ಒಂದು ಭಾಗದಷ್ಟು ಆಶ್ವಾಸನೆಗಳನ್ನು ಕೂಡ ಪೂರೈಸಿಲ್ಲ. ಪ್ರಧಾನಿ ಮೋದಿಯವರು ಸುಳ್ಳು ಆಶ್ವಾಸನೆಗಳನ್ನು ನೀಡುತ್ತಿದ್ದಾರೆ.ನೋಟುಗಳ ಚಲಾವಣೆ ಹಿಂತೆಗೆತ ಕ್ರಮವನ್ನು ಟೀಕಿಸಿದ ಅವರು, ಜನರು ಇದಕ್ಕೆ ಸರಿಯಾದ ಪ್ರತ್ಯುತ್ತರ ನೀಡುತ್ತಾರೆ.
ಬಿಹಾರಕ್ಕಿಂತ ಹೆಚ್ಚು ಅಪಜಯವನ್ನು ಉತ್ತರ ಪ್ರದೇಶದಲ್ಲಿ ಜನರು ಕಾಣುತ್ತಾರೆ ಎಂದು ಅವರು ಹರಿಹಾಯ್ದರು.ಮೀಸಲಾತಿ ಕುರಿತು ಆರ್ಎಸ್ಎಸ್ ವಕ್ತಾರ ಮೋಹನ್ ವೈದ್ಯ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮೀಸಲಾತಿ ಕುರಿತು ಪಕ್ಷದ ವಿರೋಧಿ ಭಾವನೆ ಈಗ ಜನತೆಗೆ ಗೊತ್ತಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT