ಅಪಘಾತಗೊಂಡ ರೈಲು 
ದೇಶ

ಹಿರಾಖಂಡ್ ರೈಲು ಅಪಘಾತ: ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ

ಆಂಧ್ರ ಪ್ರದೇಶದ ವಿಜಯನಗರಂನಲ್ಲಿ ಉಂಟಾದ ರೈಲು ದುರಂತದ ಬಗ್ಗೆ ತನಿಖೆ ನಡೆಸಲು ರೈಲ್ವೆ...

ವಿಜಿಯನಗರಂ: ಆಂಧ್ರ ಪ್ರದೇಶದ ವಿಜಯನಗರಂನಲ್ಲಿ ಉಂಟಾದ ರೈಲು ದುರಂತದ ಬಗ್ಗೆ ತನಿಖೆ ನಡೆಸಲು ರೈಲ್ವೆ ಸಚಿವ ಸುರೇಶ್ ಪ್ರಭು ಆದೇಶ ನೀಡಿದ್ದಾರೆ. ರೈಲ್ವೆ ಸುರಕ್ಷತಾ  ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಯಲಿದೆ. 
ಅಲ್ಲದೆ ಘಟನೆಗೆ ಕಾರಣಕರ್ತರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ನಕ್ಸಲ್ ಪೀಡಿತ  ರಾಜ್ಯ ಒಡಿಶಾ ಸಮೀಪ ಈ ದುರ್ಘಟನೆ ಸಂಭವಿಸಿರುವುದರಿಂದ ದುಷ್ಕರ್ಮಿಗಳು ಹಳಿಯನ್ನು  ಹಾಳುಗೆಡವಿ ವಿಧ್ವಂಸಕ ಕೃತ್ಯವೆಸಗಿದರಬಹುದು ಎಂದು ರೈಲ್ವೆ ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದಾರೆ.
ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಆಂಧ್ರ ಪ್ರದೇಶ ಸರ್ಕಾರ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಕೇಂದ್ರ ಸರ್ಕಾರದ 2 ಲಕ್ಷ ರೂಪಾಯಿ ಪರಿಹಾರದ ಜೊತೆಗೆ ನಮ್ಮ ಸರ್ಕಾರ ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ  ರೂಪಾಯಿ ಪರಿಹಾರ ನೀಡಲಾಗುವುದು ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament Monsoon Session: 5ನೇ ದಿನವೂ ಗದ್ದಲದ ವಾತಾವರಣ; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪ್ರತಿಪಕ್ಷಗಳ ಪಟ್ಟು, ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ..!

ಕೆಆರ್ ಎಸ್, ಕಬಿನಿ ಖಾಲಿ ಖಾಲಿ: ಏಷ್ಯಾದ ಮೊದಲ ವಿದ್ಯುತ್ ಉತ್ಪಾದನಾ ಘಟಕ ಸ್ಥಗಿತ; ರಾಜ್ಯದಲ್ಲಿ ಕರೆಂಟ್ ಕೊರತೆ ಸಾಧ್ಯತೆ!

ಇಂದೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ? ಮಧ್ಯಾಹ್ನ 12.30 ಕ್ಕೆ CJP, ಕೇಂದ್ರ ಸರ್ಕಾರದ ನಡುವೆ ಮಹತ್ವದ ಮಾತುಕತೆ

ಕೇಂದ್ರದ ಭರವಸೆಗೆ ಮಣಿದ Sonam Wangchuk: 26 ದಿನಗಳ ಉಪವಾಸ ಅಂತ್ಯ, Dharmendra Pradhan ರಾಜೀನಾಮೆ ನೀಡದ ಹೊರತು ಪ್ರತಿಭಟನೆ ನಿಲ್ಲಲ್ಲ ಎಂದ CJP..!

ಮೂವರು ಒಟ್ಟಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸ್ಯಾಂಡಲ್‌ವುಡ್ ತಾರೆಯರು!