ಅಪಘಾತ ಸಂಭವಿಸಿದ ಸ್ಥಳದ ದೃಶ್ಯ 
ದೇಶ

ಹಿರಾಖಂಡ್ ಎಕ್ಸ್ ಪ್ರೆಸ್ ರೈಲು ದುರಂತ: ನಕ್ಸಲೀಯರ ಪಾತ್ರ ನಿರಾಕರಿಸಿದ ಒಡಿಶಾ ಪೊಲೀಸರು

ಹಿರಾಖಂಡ್ ಎಕ್ಸ್ ಪ್ರೆಸ್ ರೈಲು ಅಪಘಾತದ ಹಿಂದೆ ಮಾವೋವಾದಿಗಳ ಪಾತ್ರವನ್ನು ...

ಭುವನೇಶ್ವರ್: ಹಿರಾಖಂಡ್ ಎಕ್ಸ್ ಪ್ರೆಸ್ ರೈಲು ಅಪಘಾತದ ಹಿಂದೆ ಮಾವೋವಾದಿಗಳ ಪಾತ್ರವನ್ನು ಒಡಿಶಾ ಪೊಲೀಸರು ತಳ್ಳಿ ಹಾಕಿದ್ದಾರೆ.
ಜಗ್ದಲ್ಪುರ್-ಭುವನೇಶ್ವರ ಎಕ್ಸ್ ಪ್ರೆಸ್ ರೈಲು ಅಪಘಾತದ ಹಿಂದೆ ಮಾವೋವಾದಿಗಳ ಪಾತ್ರವಿರುವ ಬಗ್ಗೆ ಯಾವುದೇ ಸುಳಿವು ಇಲ್ಲ ಎಂದು ಒಡಿಶಾ ಡಿಜಿಪಿ ಕೆ.ಬಿ.ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಜೊತೆ ಪರಾಮರ್ಶೆ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಈ ಪ್ರತಿಕ್ರಿಯೆ ನೀಡಿದರು.
ನಕ್ಸಲ್ ಪೀಡಿತ ರಾಜ್ಯಕ್ಕೆ ಸಮೀಪದಲ್ಲಿ ಅಪಘಾತ ಸಂಭವಿಸಿರುವುದರಿಂದ ಮಾವೋವಾದಿಗಳು ರೈಲ್ವೆ ಹಳಿಗಳನ್ನು ನಾಶಪಡಿಸಿ ಅಪಘಾತವನ್ನುಂಟುಮಾಡಿರಬಹುದು ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದರು.
ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿರುವ ಹಿರಿಯ ಅಧಿಕಾರಿಯೊಬ್ಬರು ಅಪಘಾತದಲ್ಲಿ ನಕ್ಸಲ್ ರ ಭಾಗಿಯ ಶಂಕೆಯನ್ನು ನಿರಾಕರಿಸಿದ್ದಾರೆ.
ಮಾವೋವಾದಿಗಳ ಪಾಲ್ಗೊಳ್ಳುವಿಕೆಯನ್ನು ನಾವು ಸಂಪೂರ್ಣವಾಗಿ ತಳ್ಳಿಹಾಕುತ್ತೇವೆ. ಕುನೆರು ಮಾವೋವಾದಿ ಪೀಡಿತ ವಲಯವಲ್ಲ ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT