ಸೋನಿಯಾ ಗಾಂಧಿ 
ದೇಶ

ಎಸ್ ಪಿ-ಕಾಂಗ್ರೆಸ್ ಸೀಟು ಹಂಚಿಕೆ ಮಾತುಕತೆಗೆ ಸೋನಿಯಾ ಗಾಂಧಿ ಪ್ರವೇಶ

ಉತ್ತರ ಪ್ರದೇಶದ ವಿಧಾನಸಭ ಚುನಾವಣೆಯ ಸೀಟು ಹಂಚಿಕೆ ವಿಷಯದಲ್ಲಿ ಸಮಾಜವಾದಿ ಪಕ್ಷ- ಕಾಂಗ್ರೆಸ್ ಪಕ್ಷದ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಬಿಕ್ಕಟ್ಟು ನಿವಾರಣೆಯ ಜವಾಬ್ದಾರಿಯನ್ನು ಸೋನಿಯಾ ಗಾಂಧಿ ವಹಿಸಿಕೊಂಡಿದ್ದಾರೆ.

ನವದೆಹಲಿ: ಉತ್ತರ ಪ್ರದೇಶದ ವಿಧಾನಸಭ ಚುನಾವಣೆಯ ಸೀಟು ಹಂಚಿಕೆ ವಿಷಯದಲ್ಲಿ ಸಮಾಜವಾದಿ ಪಕ್ಷ- ಕಾಂಗ್ರೆಸ್ ಪಕ್ಷದ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಬಿಕ್ಕಟ್ಟು ನಿವಾರಣೆಯ ಜವಾಬ್ದಾರಿಯನ್ನು ಸೋನಿಯಾ ಗಾಂಧಿ ವಹಿಸಿಕೊಂಡಿದ್ದಾರೆ. 
ಅಖಿಲೇಶ್ ಯಾದವ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿರುವ ಸೋನಿಯಾ ಗಾಂಧಿ, ಸೀಟು ಹಂಚಿಕೆ ಬಗ್ಗೆ ಚರ್ಚಿಸಿದ್ದಾರೆ. ಪರಿಣಾಮವಾಗಿ ಕಾಂಗ್ರೆಸ್ ನಾಯಕರಲ್ಲಿ ಉತ್ಸಾಹ ಮೂಡಿದೆ. ಸಮಾಜವಾದಿ ಪಕ್ಷ  ಕಾಂಗ್ರೆಸ್ ನೊಂದಿಗೆ 100 ವಿಧಾನಸಭಾ ಕ್ಷೇತ್ರಗಳಲ್ಲಿ ಹೊಂದಾಣಿ ಮಾಡಿಕೊಳ್ಳಲು ಮುಂದಾಗಿದೆ. ಆದರೆ ಕಾಂಗ್ರೆಸ್ ಪಕ್ಷ 120 ಕ್ಷೇತ್ರಗಳಲ್ಲಿ ಸೀಟು ಹಂಚಿಕೆಯಾಗಬೇಕು ಎಂದು ಪಟ್ಟು ಹಿಡಿದಿರುವುದು ಮೈತ್ರಿಯಲ್ಲಿ ಬಿರುಕು ಮೂಡಲು ಕಾರಣವಾಗಿತ್ತು. 
ಆದರೆ ಈಗ ಸೋನಿಯಾ ಗಾಂಧಿ ಮಾತುಕತೆಗೆ ಮುಂದಾಗಿದ್ದು, ಎಐಸಿಸಿ ಅಧ್ಯಕ್ಷರ ಮಧ್ಯಸ್ಥಿಕೆಯಿಂದ ಕಾಂಗ್ರೆಸ್-ಎಸ್ ಪಿ ಮೈತ್ರಿಗೆ ಮತ್ತಷ್ಟು ಬಲ ದೊರೆಯಲಿದೆ ಎಂದು ಕಾಂಗ್ರೆಸ್ ನ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಚುನಾವಣೆಯಲ್ಲಿ ಉಭಯ ಪಕ್ಷಗಳಿಗೂ ಪರಸ್ಪರರ ಅಗತ್ಯತೆ ಇದೆ, ಶೀಘ್ರವೇ ಎಲ್ಲವೂ ನಿರ್ಧಾರವಾಗಲಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.   

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT