ಸೋನಿಯಾ ಗಾಂಧಿ 
ದೇಶ

ಎಸ್ ಪಿ-ಕಾಂಗ್ರೆಸ್ ಸೀಟು ಹಂಚಿಕೆ ಮಾತುಕತೆಗೆ ಸೋನಿಯಾ ಗಾಂಧಿ ಪ್ರವೇಶ

ಉತ್ತರ ಪ್ರದೇಶದ ವಿಧಾನಸಭ ಚುನಾವಣೆಯ ಸೀಟು ಹಂಚಿಕೆ ವಿಷಯದಲ್ಲಿ ಸಮಾಜವಾದಿ ಪಕ್ಷ- ಕಾಂಗ್ರೆಸ್ ಪಕ್ಷದ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಬಿಕ್ಕಟ್ಟು ನಿವಾರಣೆಯ ಜವಾಬ್ದಾರಿಯನ್ನು ಸೋನಿಯಾ ಗಾಂಧಿ ವಹಿಸಿಕೊಂಡಿದ್ದಾರೆ.

ನವದೆಹಲಿ: ಉತ್ತರ ಪ್ರದೇಶದ ವಿಧಾನಸಭ ಚುನಾವಣೆಯ ಸೀಟು ಹಂಚಿಕೆ ವಿಷಯದಲ್ಲಿ ಸಮಾಜವಾದಿ ಪಕ್ಷ- ಕಾಂಗ್ರೆಸ್ ಪಕ್ಷದ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಬಿಕ್ಕಟ್ಟು ನಿವಾರಣೆಯ ಜವಾಬ್ದಾರಿಯನ್ನು ಸೋನಿಯಾ ಗಾಂಧಿ ವಹಿಸಿಕೊಂಡಿದ್ದಾರೆ. 
ಅಖಿಲೇಶ್ ಯಾದವ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿರುವ ಸೋನಿಯಾ ಗಾಂಧಿ, ಸೀಟು ಹಂಚಿಕೆ ಬಗ್ಗೆ ಚರ್ಚಿಸಿದ್ದಾರೆ. ಪರಿಣಾಮವಾಗಿ ಕಾಂಗ್ರೆಸ್ ನಾಯಕರಲ್ಲಿ ಉತ್ಸಾಹ ಮೂಡಿದೆ. ಸಮಾಜವಾದಿ ಪಕ್ಷ  ಕಾಂಗ್ರೆಸ್ ನೊಂದಿಗೆ 100 ವಿಧಾನಸಭಾ ಕ್ಷೇತ್ರಗಳಲ್ಲಿ ಹೊಂದಾಣಿ ಮಾಡಿಕೊಳ್ಳಲು ಮುಂದಾಗಿದೆ. ಆದರೆ ಕಾಂಗ್ರೆಸ್ ಪಕ್ಷ 120 ಕ್ಷೇತ್ರಗಳಲ್ಲಿ ಸೀಟು ಹಂಚಿಕೆಯಾಗಬೇಕು ಎಂದು ಪಟ್ಟು ಹಿಡಿದಿರುವುದು ಮೈತ್ರಿಯಲ್ಲಿ ಬಿರುಕು ಮೂಡಲು ಕಾರಣವಾಗಿತ್ತು. 
ಆದರೆ ಈಗ ಸೋನಿಯಾ ಗಾಂಧಿ ಮಾತುಕತೆಗೆ ಮುಂದಾಗಿದ್ದು, ಎಐಸಿಸಿ ಅಧ್ಯಕ್ಷರ ಮಧ್ಯಸ್ಥಿಕೆಯಿಂದ ಕಾಂಗ್ರೆಸ್-ಎಸ್ ಪಿ ಮೈತ್ರಿಗೆ ಮತ್ತಷ್ಟು ಬಲ ದೊರೆಯಲಿದೆ ಎಂದು ಕಾಂಗ್ರೆಸ್ ನ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಚುನಾವಣೆಯಲ್ಲಿ ಉಭಯ ಪಕ್ಷಗಳಿಗೂ ಪರಸ್ಪರರ ಅಗತ್ಯತೆ ಇದೆ, ಶೀಘ್ರವೇ ಎಲ್ಲವೂ ನಿರ್ಧಾರವಾಗಲಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.   

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...." ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾ ನೇರಾ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು, ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆ- EY ವರದಿ

ಚಿತ್ರದುರ್ಗ ಶಾಸಕ ವಿರೇಂದ್ರ ಪಪ್ಪಿ ಮತ್ತೆ ಆರು ದಿನ ED ವಶಕ್ಕೆ

SCROLL FOR NEXT