ದೇಶ

ಉತ್ತರ ಪ್ರದೇಶ ಚುನಾವಣಾ ಪ್ರಚಾರದಿಂದ ಬಿಜೆಪಿ ಹಿರಿಯ ನಾಯಕ ಅಡ್ವಾಣಿಗೆ ಖೋಕ್!

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ತಯಾರಿ ನಡೆಸಿದ್ದು, ಚುನಾವಣಾ ಪ್ರಚಾರ ತಂಡವನ್ನು ಪ್ರಕಟಿಸಲಾಗಿದೆ.

ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ತಯಾರಿ ನಡೆಸಿದ್ದು, ಚುನಾವಣಾ ಪ್ರಚಾರ ತಂಡವನ್ನು ಪ್ರಕಟಿಸಲಾಗಿದೆ.   
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್, ಯೋಗಿ ಆದಿತ್ಯನಾಥ್ ಸೇರಿದಂತೆ 17 ಸಚಿವರನ್ನೊಳಗೊಂಡ ತಂಡವನ್ನು ಪ್ರಕಟಿಸಲಾಗಿದ್ದು, ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಅವರನ್ನು ಪ್ರಚಾರ ತಂಡದಿಂದ ಕೈಬಿಡಲಾಗಿದೆ. 
ಫೆ.11 ರಿಂದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪರಿಣಾಮಕಾರಿ ಪ್ರಚಾರಕ್ಕೆ ಬಿಜೆಪಿ ತಯಾರಿ ನಡೆಸಿದೆ. ಎಲ್ ಕೆ ಅಡ್ವಾಣಿ, ಉತ್ತರ ಪ್ರದೇಶದ ಸಂಸದರೇ ಆದ ಮುರಳಿ ಮನೋಹರ್ ಜೋಷಿ ಅವರೊಂದಿಗೆ ಸುಲ್ತಾನ್ ಪುರ ಸಂಸದ ವರುಣ್ ಗಾಂಧಿ ಅವರನ್ನೂ ಪ್ರಚಾರ ತಂಡದಿಂದ ಕೈ ಬಿಟ್ಟಿರುವುದು ಕುತೂಹಲ ಮೂಡಿಸಿದೆ. ಇನ್ನು ವಿವಾದಾತ್ಮಕ ಹೇಳಿಕೆ ನೀಡುವ ಸಂಸದ ಸಾಕ್ಷಿ ಮಹಾರಾಜ್ ಅವರನ್ನೂ ಪ್ರಚಾರ ತಂಡದಿಂದ ಕೈಬಿಡುವ ಮೂಲಕ ಬಿಜೆಪಿ ವಿವಾದಾತ್ಮಕ ಹೇಳಿಕೆ ನೀಡುವವರಿಗೆ ಸ್ಪಷ್ಟ ಸಂದೇಶ ರವಾನೆ ಮಾಡಿದೆ. 
ಕೇಂದ್ರದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತದ ಮಾದರಿ, ಉದ್ಯೋಗ ಸೃಷ್ಟಿ, ಅಭಿವೃದ್ಧಿಯ ವಿಷಯಗಳನ್ನು ಪ್ರಧಾನ ಅಂಶವನ್ನಾಗಿರಿಸಿಕೊಂಡು ಉತ್ತರ ಪ್ರದೇಶದ ಚುನಾವಣೆಯನ್ನು ಎದುರಿಸಲು ಬಿಜೆಪಿ ನಿರ್ಧರಿಸಿದ್ದು ಒಟ್ಟು 12 ರ್ಯಾಲಿಗಳನ್ನು ನಡೆಸಲಿದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT