ಅಖಿಲೇಶ್ ಯಾದವ್ - ರಾಹುಲ್ ಗಾಂಧಿ 
ದೇಶ

ಉ.ಪ್ರದೇಶ ಚುನಾವಣೆ: ‘ಕೈ’ಹಿಡಿದ ಸಮಾಜವಾದಿ ಪಕ್ಷ, 105 ಕ್ಷೇತ್ರಗಳಲ್ಲಿ ಕಾಂಗ್ರೆಸ್​ಸ್ಪರ್ಧೆ

ಸೀಟು ಹಂಚಿಕೆಗೆ ಸಂಬಂಧಿಸದಂತೆ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷದ ನಡುವಿನ ಬಿಕ್ಕಟ್ಟು ಪರಿಹಾರವಾಗಿದ್ದು, ಮುಂದಿನ ತಿಂಗಳು....

ಲಖನೌ: ಸೀಟು ಹಂಚಿಕೆಗೆ ಸಂಬಂಧಿಸದಂತೆ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷದ ನಡುವಿನ ಬಿಕ್ಕಟ್ಟು ಪರಿಹಾರವಾಗಿದ್ದು, ಮುಂದಿನ ತಿಂಗಳು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ 105 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಭಾನುವಾರ ಕಾಂಗ್ರೆಸ್ ಹೇಳಿದೆ.
ನಿನ್ನೆಯಷ್ಟೇ ಉತ್ತರ ಪ್ರದೇಶ ಮುಖ್ಯಮಂತ್ರಿ ಹಾಗೂ ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಕಾಂಗ್ರೆಸ್ ಗೆ 99 ಸೀಟ್ ಗಳ ಆಫರ್ ನೀಡಿದ್ದರು. ಆದರೆ ಇದಕ್ಕೆ ಒಪ್ಪಂದ ಕಾಂಗ್ರೆಸ್ 121 ಸ್ಥಾನಗಳ ಬೇಡಿಕೆಯಿಟ್ಟಿತ್ತು. ಅಂತಿಮವಾಗಿ ಕಾಂಗ್ರೆಸ್ 105 ಸ್ಥಾನಗಳನ್ನು ಒಪ್ಪಿಕೊಳ್ಳುವ ಮೂಲಕ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ.
ಒಟ್ಟು 403 ಕ್ಷೇತ್ರಗಳ ಪೈಕಿ ಸಮಾಜವಾದಿ ಪಕ್ಷ 298 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಆರಂಭದಲ್ಲಿ 121 ಸೀಟುಗಳನ್ನು ಬಯಸಿದ್ದ ಕಾಂಗ್ರೆಸ್​ಗೆ ಅಖಿಲೇಶ್ ಯಾದವ್ ಕೇವಲ 99 ಸೀಟುಗಳನ್ನು ನೀಡಿದ್ದು ಮುನಿಸಿಗೆ ಕಾರಣವಾಗಿತ್ತು.
ಸೀಟು ಹಂಚಿಕೆ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಎಸ್​ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಇಂದು ಪರಸ್ಪರ ಚರ್ಚೆಯ ನಂತರ ಮೈತ್ರಿ ಮಾತುಕತೆ ಯಶಸ್ವಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT