ಜಲ್ಲಿಕಟ್ಟು ವಿಧೇಯಕಕ್ಕೆ ತಮಿಳುನಾಡು ವಿಧಾಸಭೆಯಲ್ಲಿ ಒಮ್ಮತದ ಅಂಗೀಕಾರ 
ದೇಶ

ಜಲ್ಲಿಕಟ್ಟು ವಿಧೇಯಕಕ್ಕೆ ತಮಿಳುನಾಡು ವಿಧಾಸಭೆಯಲ್ಲಿ ಸರ್ವಾನುಮತದ ಅಂಗೀಕಾರ

ಜಲ್ಲಿಕಟ್ಟು ಕ್ರೀಡೆ ನಡೆಸಲು ಸಾರ್ವಜನಿಕ ಪ್ರತಿಭಟನೆಗೆ ಮಣಿದಿರುವ ತಮಿಳುನಾಡು ಸರ್ಕಾರ, ವಿಧಾನಸಭೆಯಲ್ಲಿ ಜಲ್ಲಿಕಟ್ಟು ವಿಧೇಯಕವನ್ನು ಸರ್ವಾನುಮತದಿಂದ ಅಂಗೀಕರಿಸಿದೆ.

ಚೆನ್ನೈ: ಜಲ್ಲಿಕಟ್ಟು ಕ್ರೀಡೆ ನಡೆಸಲು ಸಾರ್ವಜನಿಕ ಪ್ರತಿಭಟನೆಗೆ ಮಣಿದಿರುವ ತಮಿಳುನಾಡು ಸರ್ಕಾರ, ವಿಧಾನಸಭೆಯಲ್ಲಿ ಜಲ್ಲಿಕಟ್ಟು ವಿಧೇಯಕವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. 
ಜಲ್ಲಿಕಟ್ಟು ಕ್ರೀಡೆಗೆ ಸುಪ್ರೀಂ ಕೋರ್ಟ್ ನಿರ್ಬಂಧ ವಿಧಿಸಿದ್ದ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಕರೆದಿದ್ದ ವಿಶೇಷ ಅಧಿವೇಶನದಲ್ಲಿ ಸಿಎಂ ಪನ್ನೀರ್ ಸೆಲ್ವಂ ಜಲ್ಲಿಕಟ್ಟು ವಿಧೇಯಕವನ್ನು ಮಂಡನೆ ಮಾಡಿದ್ದರು. ಸಿಎಂ ಮಂಡಿಸಿದ ವಿಧೇಯಕಕ್ಕೆ ಒಮ್ಮತದ ಅಂಗೀಕಾರ ದೊರೆತಿದ್ದು, ಜಲ್ಲಿಕಟ್ಟು ಕ್ರೀಡೆ ನಡೆಸುವುದಕ್ಕೆ ಉಂಟಾಗಿದ್ದ ಕಾನೂನಾತ್ಮಕ ತೊಡಕಿಗೆ ಪರಿಹಾರ ದೊರೆತಿದೆ. ಜಲ್ಲಿಕಟ್ಟು ಮಸೂದೆಯನ್ನು ಅಂಗೀಕರಿಸಿರುವುದನ್ನು ಎಐಎಡಿಎಂಕೆ ಪಕ್ಷ ಟ್ವೀಟ್ ಮೂಲಕ ಸ್ಪಷ್ಟಪಡಿಸಿದೆ. 
ವಿಧೇಯಕ ಮಂಡನೆಗೂ ಮುನ್ನ  ಜಲ್ಲಿಕಟ್ಟು ಸಂಬಂಧ ತಮಿಳುನಾಡಿನಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. 

ಜಲ್ಲಿಕಟ್ಟು ಗೂಳಿಗೆ ಪೊಲೀಸ್ ಪೇದೆ ಬಲಿ

ವಿರುಧ್ ನಗರ್ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಜಲ್ಲಿಕಟ್ಟು ಕ್ರೀಡೆಯಲ್ಲಿ ಗೂಳಿಗೆ ವಿ.ಶಂಕರ್ (29) ಎಂಬ ಪೊಲೀಸ್ ಪೇದೆ ಬಲಿಯಾಗಿದ್ದಾರೆ. ಗೂಳಿ ದಾಳಿಗೆ ಸಿಲುಕಿದ್ದ ಶಂಕರ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು. ಕಾರ್ಯಕ್ರಮದಲ್ಲಿ 100 ಕ್ಕೂ ಹೆಚ್ಚು ಗೂಳಿಗಳು ಭಾಗವಸಿದ್ದವು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT