ಪ್ರಧಾನಿ ನರೇಂದ್ರ ಮೋದಿ ಮತ್ತು ಯುಎಇ ಯುವರಾಜ ಶೇಖ್ ಮೊಹಮ್ಮದ್ ಬಿನ್ ಝಾಯೇದ್ ಅಲ್ ನಹ್ಯಾನ್ ಸಮ್ಮುಖದಲ್ಲಿ 14 ಒಪ್ಪಂದಗಳಿಗೆ ಸಹಿ ಹಾಕಿ ವಿನಿಮಯ ಮಾಡಿಕೊಂಡ ಭಾರತ, ಯುಎಇ 
ದೇಶ

ಭಯೋತ್ಪಾದನೆಗೆ ಸಂಬಂಧಿಸಿದಂತೆ ಭಾರತ, ಅರಬ್ ಒಂದೇ ತರಹದ ಕಾಳಜಿ ಹೊಂದಿವೆ: ಪ್ರಧಾನಿ ಮೋದಿ

ಭಯೋತ್ಪಾದನೆ ಮತ್ತು ತೀವ್ರಗಾಮಿತ್ವದ ಬಗ್ಗೆ ಭಾರತ ಮತ್ತು ಸಂಯುಕ್ತ ಅರಬ್ ಸಂಸ್ಥಾನ(ಯುಎಇ)...

ನವದೆಹಲಿ: ಭಯೋತ್ಪಾದನೆ ಮತ್ತು ತೀವ್ರಗಾಮಿತ್ವದ ಬಗ್ಗೆ ಭಾರತ ಮತ್ತು ಸಂಯುಕ್ತ ಅರಬ್ ಸಂಸ್ಥಾನ(ಯುಎಇ) ಸಮಾನ ಕಾಳಜಿ ಹೊಂದಿದ್ದು, ಸಮಾಜದ ಭದ್ರತೆಯನ್ನು ಕಾಪಾಡಲು ಹಿಂಸೆ ಮತ್ತು ಉಗ್ರಗಾಮಿತ್ವವನ್ನು ಸದೆಬಡಿಯುವುದು ಅಗತ್ಯವಿದೆ ಎಂದು ಎರಡೂ ರಾಷ್ಟ್ರಗಳು ಅರಿತುಕೊಂಡಿವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಪಶ್ಚಿಮ ಏಷ್ಯಾ ಮತ್ತು ಗಲ್ಫ್ ದೇಶಗಳ ಅಭಿವೃದ್ಧಿಗಳ ಬಗ್ಗೆ ತಾವು ಮತ್ತು ಅರಬ್ ರಾಷ್ಟ್ರದ ಯುವರಾಜ ಶೇಖ್ ಮೊಹಮ್ಮದ್ ಬಿನ್ ಝಾಯೇದ್ ಅಲ್ ನಹ್ಯಾನ್ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ. ಶಾಂತಿ ಮತ್ತು ಸ್ಥಿರತೆಗೆ ತಾವಿಬ್ಬರೂ ಆಸಕ್ತಿ ತೋರಿಸಿರುವುದಾಗಿ ಪ್ರಧಾನಿ ಹೇಳಿದ್ದಾರೆ.
ನಮ್ಮ ಬಾಂಧವ್ಯ ಕೇವಲ ಎರಡು ದೇಶಗಳಿಗೆ ಮಾತ್ರ ಸಂಬಂಧಿಸಿದ್ದಲ್ಲ. ನಮ್ಮ ಸುತ್ತಮುತ್ತಲ ದೇಶಗಳಿಗೂ ಮುಖ್ಯವಾಗಿರುತ್ತದೆ. ನಮ್ಮಲ್ಲಿನ ಒಗ್ಗಟ್ಟು ಪ್ರದೇಶದ ಸ್ಥಿರತೆಗೆ ಸಹಾಯವಾಗಲಿದೆ. ಮತ್ತು ನಮ್ಮ ಆರ್ಥಿಕ ಸಹಭಾಗಿತ್ವ ಸ್ಥಳೀಯ ಮತ್ತು ಜಾಗತಿಕ ಸಮೃದ್ಧಿಗೆ ಮೂಲವಾಗಿರುತ್ತದೆ ಎಂದು ಪ್ರಧಾನಿ ತಿಳಿಸಿದರು.
ರಕ್ಷಣಾ ಮತ್ತು ಭದ್ರತಾ ವಲಯಗಳಲ್ಲಿ ಸಹಕಾರ ಎರಡೂ ದೇಶಗಳ ನಡುವಿನ ಸಂಬಂಧವನ್ನು ಹೊಸ ದಿಕ್ಕಿನತ್ತ ಕೊಂಡೊಯ್ಯಲು ಸಹಾಯವಾಗಲಿದೆ ಎಂದು ಮೋದಿ ಹೇಳಿದರು.
ಭಾರತ ಮತ್ತು ಅರಬ್ ಸಂಯುಕ್ತ ಸಂಸ್ಥಾನ ಇಂದು 14 ಒಪ್ಪಂದಗಳಿಗೆ ಸಹಿ ಹಾಕಿದೆ. ರಕ್ಷಣೆ, ಕಡಲ ಸಾಗಣೆ, ವಿಸ್ತಾರವಾದ ಕಾರ್ಯತಂತ್ರ ಸಹಭಾಗಿತ್ವ, ಹಡಗು, ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ವಲಯಗಳು, ವ್ಯಾಪಾರ, ತೈಲ ಸಂಗ್ರಹ ಮತ್ತು ನಿರ್ವಹಣೆ, ಇಂಧನ ದಕ್ಷತೆ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಮತ್ತು ಮಾನವ ಕಳ್ಳ ಸಾಗಣೆಯನ್ನು ಜಂಟಿಯಾಗಿ ತಡೆಗಟ್ಟುವಿಕೆಗೆ ಸಂಬಂಧಪಟ್ಟಂತೆ ಉಭಯ ದೇಶಗಳ ನಾಯಕರ ಮಧ್ಯೆ ನಡೆದ ನಿಯೋಗ ಮಟ್ಟದ ಮಾತುಕತೆ ನಂತರ ಸಹಿ ಹಾಕಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT