68 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಅತಿಥಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ 
ದೇಶ

ಸರ್ಕಾರಿ ಬೆಂಬಲಿತ ಧರ್ಮಾಧಾರಿತ ಭಯೋತ್ಪಾದನೆಗೆ ಭಾರತ-ಯುಎಇ ಖಂಡನೆ

ಅನ್ಯ ರಾಷ್ಟ್ರಗಳ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳನ್ನು ಸಕ್ರಿಯವಾಗಿಡಲು ಧರ್ಮಾಧಾರಿತ ಭಯೋತ್ಪಾದನೆಗೆ ಸರ್ಕಾರದಿಂದಲೇ ಸಿಗುತ್ತಿರುವ ಬೆಂಬಲವನ್ನು ಭಾರತ-ಯುಎಇ ಖಂಡಿಸಿವೆ.

ನವದೆಹಲಿ: ಅನ್ಯ ರಾಷ್ಟ್ರಗಳ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳನ್ನು ಸಕ್ರಿಯವಾಗಿಡಲು ಧರ್ಮಾಧಾರಿತ ಭಯೋತ್ಪಾದನೆಗೆ ಸರ್ಕಾರದಿಂದಲೇ ಸಿಗುತ್ತಿರುವ ಬೆಂಬಲವನ್ನು ಭಾರತ-ಯುಎಇ ಖಂಡಿಸಿವೆ. ಈ ಮೂಲಕ ಭಯೋತ್ಪಾದನೆಯನ್ನು ಬೆಂಬಲಿಸುತ್ತಿರುವ ಪಾಕಿಸ್ತಾನದ ವಿರುದ್ಧ ಉಭಯ ರಾಷ್ಟ್ರಗಳು ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿವೆ. 
ಭಯೋತ್ಪಾದನೆ ವಿರುದ್ಧ ಶೂನ್ಯ ಸಹನೆ ತೋರುವುದಾಗಿ ಉಭಯ ರಾಷ್ಟ್ರಗಳು ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಭಯೋತ್ಪಾದನೆ ವಿರುದ್ಧ, ಧರ್ಮಾಧಾರಿತ ಭಯೋತ್ಪಾದನೆಗೆ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವುದಾಗಿ ಹೇಳಿವೆ. ಅಷ್ಟೇ ಅಲ್ಲದೇ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ರಾಷ್ಟ್ರಗಳ ವಿರುದ್ಧವೂ ಹೋರಾಡುವುದಾಗಿ ಭರವಸೆ ನೀಡಿರುವ ಯುಎಇ, ಭಯೋತ್ಪಾದನೆಯನ್ನು ಯಾರೂ ಸಮರ್ಥಿಸಲು ಸಾಧ್ಯವಿಲ್ಲ ಎಂದು ಜಂಟಿ ಹೇಳಿಕೆಯಲ್ಲಿ ಉಭಯ ರಾಷ್ಟ್ರಗಳೂ ಹೇಳಿವೆ. 
68 ನೇ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅಬುಧಾಬಿಯ ರಾಜ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದ  ಪ್ರಧಾನಿ ನರೇಂದ್ರ ಮೋದಿ ಭಯೋತ್ಪಾದನೆ ನಿಗ್ರಹದ ಬಗ್ಗೆಯೂ ಚರ್ಚಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತಿ ಹೆಚ್ಚು!

ಭಾರತ-ಶ್ರೀಲಂಕಾ 2ನೇ ಟೆಸ್ಟ್ ಡ್ರಾದಲ್ಲಿ ಅಂತ್ಯ; WTC ಪಾಯಿಂಟ್ಸ್‌ ಟೇಬಲ್‌ನಲ್ಲಿ ಟೀಂ ಇಂಡಿಯಾಗೆ ಭಾರೀ ಹೊಡೆತ!

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಶಿವಕುಮಾರ್

CSK ಯಲ್ಲಿ ಶೇ. 25 ರಷ್ಟು ಪಾಲು ಕೇಳಿದ್ದಾರೆಯೇ ಧೋನಿ? 3,820 ಕೋಟಿ ರೂ ಕ್ಲೈಮ್ ಹಿಂದಿರುವ ಸತ್ಯವೇನು?