68 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಅತಿಥಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ 
ದೇಶ

ಸರ್ಕಾರಿ ಬೆಂಬಲಿತ ಧರ್ಮಾಧಾರಿತ ಭಯೋತ್ಪಾದನೆಗೆ ಭಾರತ-ಯುಎಇ ಖಂಡನೆ

ಅನ್ಯ ರಾಷ್ಟ್ರಗಳ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳನ್ನು ಸಕ್ರಿಯವಾಗಿಡಲು ಧರ್ಮಾಧಾರಿತ ಭಯೋತ್ಪಾದನೆಗೆ ಸರ್ಕಾರದಿಂದಲೇ ಸಿಗುತ್ತಿರುವ ಬೆಂಬಲವನ್ನು ಭಾರತ-ಯುಎಇ ಖಂಡಿಸಿವೆ.

ನವದೆಹಲಿ: ಅನ್ಯ ರಾಷ್ಟ್ರಗಳ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳನ್ನು ಸಕ್ರಿಯವಾಗಿಡಲು ಧರ್ಮಾಧಾರಿತ ಭಯೋತ್ಪಾದನೆಗೆ ಸರ್ಕಾರದಿಂದಲೇ ಸಿಗುತ್ತಿರುವ ಬೆಂಬಲವನ್ನು ಭಾರತ-ಯುಎಇ ಖಂಡಿಸಿವೆ. ಈ ಮೂಲಕ ಭಯೋತ್ಪಾದನೆಯನ್ನು ಬೆಂಬಲಿಸುತ್ತಿರುವ ಪಾಕಿಸ್ತಾನದ ವಿರುದ್ಧ ಉಭಯ ರಾಷ್ಟ್ರಗಳು ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿವೆ. 
ಭಯೋತ್ಪಾದನೆ ವಿರುದ್ಧ ಶೂನ್ಯ ಸಹನೆ ತೋರುವುದಾಗಿ ಉಭಯ ರಾಷ್ಟ್ರಗಳು ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಭಯೋತ್ಪಾದನೆ ವಿರುದ್ಧ, ಧರ್ಮಾಧಾರಿತ ಭಯೋತ್ಪಾದನೆಗೆ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವುದಾಗಿ ಹೇಳಿವೆ. ಅಷ್ಟೇ ಅಲ್ಲದೇ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ರಾಷ್ಟ್ರಗಳ ವಿರುದ್ಧವೂ ಹೋರಾಡುವುದಾಗಿ ಭರವಸೆ ನೀಡಿರುವ ಯುಎಇ, ಭಯೋತ್ಪಾದನೆಯನ್ನು ಯಾರೂ ಸಮರ್ಥಿಸಲು ಸಾಧ್ಯವಿಲ್ಲ ಎಂದು ಜಂಟಿ ಹೇಳಿಕೆಯಲ್ಲಿ ಉಭಯ ರಾಷ್ಟ್ರಗಳೂ ಹೇಳಿವೆ. 
68 ನೇ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅಬುಧಾಬಿಯ ರಾಜ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದ  ಪ್ರಧಾನಿ ನರೇಂದ್ರ ಮೋದಿ ಭಯೋತ್ಪಾದನೆ ನಿಗ್ರಹದ ಬಗ್ಗೆಯೂ ಚರ್ಚಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT